ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸುಕೇಶ್ ಚಂದ್ರಶೇಖರ್, ಸತ್ಯೇಂದ್ರ ಜೈನ್ 
ದೇಶ

ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸತ್ಯೇಂದ್ರ ಜೈನ್, ಕೇಜ್ರಿವಾಲ್ ಗೆ ಸುಕೇಶ್ ಸವಾಲು

ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆದ್ಮಿ ಪಕ್ಷದ ಮುಖಂಡ ಸತ್ಯೇಂದ್ರ ಜೈನ್ ಗೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸವಾಲು ಹಾಕಿದ್ದಾರೆ. 

ನವದೆಹಲಿ: ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆದ್ಮಿ ಪಕ್ಷದ ಮುಖಂಡ ಸತ್ಯೇಂದ್ರ ಜೈನ್ ಗೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡುವಂತೆ ಸವಾಲು ಹಾಕಿದ್ದಾರೆ. 

ಇದೇ ವೇಳೆ, ಬಿಜೆಪಿಯ ಆಣತಿಯ ಮೇರೆಗೆ ಪತ್ರ ಬರೆಯುತ್ತಿದ್ದಾರೆ ಎಂಬ ತಮ್ಮ ವಿರುದ್ಧದ ಆರೋಪವನ್ನು ಸುಕೇಶ್ ಚಂದ್ರಶೇಖರ್ ನಿರಾಕರಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಸುಕೇಶ್ ಚಂದ್ರಶೇಖರ್ ಗಂಭೀರ ಆರೋಪಗಳನ್ನು ಮಾಡಿದ್ದು, ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೇನಾ ಅವರಿಗೆ ಸರಣಿ ಪತ್ರ ಬರೆದಿದ್ದರು. 

ಇತ್ತೀಚೆಗೆ, ಶುಕ್ರವಾರ (ನಂ.11 ರಂದು) ಪತ್ರ ಬರೆದಿದ್ದ ಸುಕೇಶ್ ತಮ್ಮ ವಕೀಲರಿಗೆ ಪತ್ರಿಕಾ ಪ್ರಕಟಣೆಯನ್ನು ಪ್ರಕಟಿಸಲು ಸೂಚಿಸಿದ್ದರು. ಇದಷ್ಟೇ ಅಲ್ಲದೇ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಲು ನೀಡಲಾಗಿದ್ದ ಸಲಹೆಯನ್ನು ಸ್ವಾಗತಿಸಿ, ನಾನು ಪಾಲಿಗ್ರಾಫ್ ಪರೀಕ್ಷೆಯನ್ನು ಕೈಗೊಳ್ಳುವುದಕ್ಕೆ ಒಪ್ಪಿಗೆ ಸೂಚಿಸುತ್ತೇನೆ ಆದರೆ ಕೇಜ್ರಿವಾಲ್ ಹಾಗೂ ಸತ್ಯೇಂದ್ರ ಜೈನ್ ಸಹ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?