ಜಿತೇಂದ್ರ ಅವ್ಹಾದ್ 
ದೇಶ

ಮರಾಠಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪ್ರಕರಣ: ಎನ್‌ಸಿಪಿ ಶಾಸಕ ಜಿತೇಂದ್ರ ಅವ್ಹಾದ್ ಗೆ ಜಾಮೀನು

ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್‌ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್‌ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು...

ಮುಂಬೈ: ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್‌ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್‌ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಶಾಸಕ ಹಾಗೂ ಅವರ ಬೆಂಬಲಿಗರ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಾಗಿತ್ತು. ಥಾಣೆಯ ವಿವಿಯಾನ ಮಾಲ್ ನಲ್ಲಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಮರಾಠಿ ಚಿತ್ರ ಪ್ರದರ್ಶನವನ್ನು ಬಲವಂತವಾಗಿ ಸ್ಥಗಿತಗೊಳಿಸಿದ ಆರೋಪದ ಮೇಲೆ ಇಂದು ಬಂಧಿಸಲಾಗಿತ್ತು.

"ಈ ಚಿತ್ರದಲ್ಲಿ ಮರಾಠರ ಇತಿಹಾಸವನ್ನು ತಿರುಚಲಾಗಿದೆ ಮತ್ತು ಇಂತಹ ಚಲನಚಿತ್ರಗಳನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ" ಎಂದು ಹೇಳಿದ್ದ ಶಾಸಕರು ಹಾಗೂ ಅವರ ಬೆಂಬಲಿಗರು, ಪ್ರೇಕ್ಷಕರಿಗೆ ಹೊರಹೋಗುವಂತೆ ಕೇಳಿಕೊಂಡಿದ್ದರು. ಈ ವೇಳೆ ಅಲ್ಲಿದ್ದ ಜನರು ಹಾಗೂ ಎನ್‌ಸಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ಸಂಬಂಧ ಥಾಣೆ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT