ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಟಿಎಂಸಿ ಸಚಿವ ಅಖಿಲ್ ಗಿರಿ 
ದೇಶ

ರಾಷ್ಟ್ರಪತಿ ಮುರ್ಮು ವಿರುದ್ಧ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ, ಬಿಜೆಪಿ ಖಂಡನೆ

ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.

ನಂದಿಗ್ರಾಮ: ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.

ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಸುವೇದು ಅಧಿಕಾರಿ ನಾನು ನೋಡಲು ಚೆನ್ನಾಗಿಲ್ಲ ಎಂದು ಹೇಳುತ್ತಾರೆ. ನೀವು ತುಂಬಾ ಸುಂದರವಾಗಿದ್ದೀರಿ! ನೋಟದಿಂದ ಮಾತ್ರ ನಾವು ಯಾರನ್ನೂ ತೀರ್ಮಾನಿಸಲು ಸಾಧ್ಯವಿಲ್ಲ. ನಾವು ರಾಷ್ಟ್ರಪತಿ ಕಚೇರಿಗೆ ಗೌರವ ನೀಡುತ್ತೇವೆ. ಆದರೆ, ನಮ್ಮ ರಾಷ್ಟ್ರಪತಿ ಹೇಗೆ ಕಾಣಿಸುತ್ತಾರೆ? ಎಂದು ಕೇಳಿದ್ದಾರೆ.

ಬಂಗಾಳ ಸಚಿವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಆಕೆಯ ಪಕ್ಷ ಬುಡಕಟ್ಟು ವಿರೋಧಿ ಎಂದು ಟೀಕಿಸಿದೆ. ದ್ರೌಪದಿ ಮುರ್ಮು  ಬುಡಕಟ್ಟು ಸಮುದಾಯದಿಂದ ಬಂದಿದ್ದು, ಅವರ ನೋಟದ ಬಗ್ಗೆ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಮತಾ ಬ್ಯಾನರ್ಜಿಹಾಗೂ ಅವರ ಪಕ್ಷ ಆದಿವಾಸಿ ವಿರೋಧಿಯಾಗಿದೆ ಎಂದು ಬಂಗಾಳ ಬಿಜೆಪಿ ಘಟಕ ಗಿರಿ ವಿಡಿಯೋದೊಂದಿಗೆ  ಟ್ವೀಟ್ ಮಾಡಿದೆ.

ಜುಲೈನಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ಅವರನ್ನು ರಾಷ್ಟ್ರಪತ್ನಿ ಎಂದು ಕರೆಯುವ ಮೂಲಕ ವಿವಾದಕ್ಕೆ ಕಾರಣವಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?

SCROLL FOR NEXT