ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಟಿಎಂಸಿ ಸಚಿವ ಅಖಿಲ್ ಗಿರಿ 
ದೇಶ

ರಾಷ್ಟ್ರಪತಿ ಮುರ್ಮು ವಿರುದ್ಧ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ, ಬಿಜೆಪಿ ಖಂಡನೆ

ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.

ನಂದಿಗ್ರಾಮ: ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.

ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಸುವೇದು ಅಧಿಕಾರಿ ನಾನು ನೋಡಲು ಚೆನ್ನಾಗಿಲ್ಲ ಎಂದು ಹೇಳುತ್ತಾರೆ. ನೀವು ತುಂಬಾ ಸುಂದರವಾಗಿದ್ದೀರಿ! ನೋಟದಿಂದ ಮಾತ್ರ ನಾವು ಯಾರನ್ನೂ ತೀರ್ಮಾನಿಸಲು ಸಾಧ್ಯವಿಲ್ಲ. ನಾವು ರಾಷ್ಟ್ರಪತಿ ಕಚೇರಿಗೆ ಗೌರವ ನೀಡುತ್ತೇವೆ. ಆದರೆ, ನಮ್ಮ ರಾಷ್ಟ್ರಪತಿ ಹೇಗೆ ಕಾಣಿಸುತ್ತಾರೆ? ಎಂದು ಕೇಳಿದ್ದಾರೆ.

ಬಂಗಾಳ ಸಚಿವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಆಕೆಯ ಪಕ್ಷ ಬುಡಕಟ್ಟು ವಿರೋಧಿ ಎಂದು ಟೀಕಿಸಿದೆ. ದ್ರೌಪದಿ ಮುರ್ಮು  ಬುಡಕಟ್ಟು ಸಮುದಾಯದಿಂದ ಬಂದಿದ್ದು, ಅವರ ನೋಟದ ಬಗ್ಗೆ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಮತಾ ಬ್ಯಾನರ್ಜಿಹಾಗೂ ಅವರ ಪಕ್ಷ ಆದಿವಾಸಿ ವಿರೋಧಿಯಾಗಿದೆ ಎಂದು ಬಂಗಾಳ ಬಿಜೆಪಿ ಘಟಕ ಗಿರಿ ವಿಡಿಯೋದೊಂದಿಗೆ  ಟ್ವೀಟ್ ಮಾಡಿದೆ.

ಜುಲೈನಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ಅವರನ್ನು ರಾಷ್ಟ್ರಪತ್ನಿ ಎಂದು ಕರೆಯುವ ಮೂಲಕ ವಿವಾದಕ್ಕೆ ಕಾರಣವಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

Video: 'ಭಾರತ ಛಿದ್ರ ಛಿದ್ರ ಆದ್ರೇನೆ ಬಾಂಗ್ಲಾದೇಶದಲ್ಲಿ ಶಾಂತಿ'; ಮಾಜಿ ಸೇನಾ ಮುಖ್ಯಸ್ಥನ ಪ್ರಚೋದನಾ ಹೇಳಿಕೆ

ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

SCROLL FOR NEXT