ಸಚಿವ ಕೆ ಪೊನ್ಮುಡಿ 
ದೇಶ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಜಾರಿಗೆ ತರುವುದಿಲ್ಲ: ತಮಿಳುನಾಡು ಸಚಿವ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ  ಶೇ. 10 ರಷ್ಟು ಮೀಸಲಾತಿಯನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಶನಿವಾರ ಹೇಳಿದ್ದಾರೆ.

ಚೆನ್ನೈ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್‌) ಶಿಕ್ಷಣ ಮತ್ತು ಉದ್ಯೋಗದಲ್ಲಿ  ಶೇ. 10 ರಷ್ಟು ಮೀಸಲಾತಿಯನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಶನಿವಾರ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ಮುಡಿ ಅವರು, ತಮಿಳುನಾಡು ಸರ್ಕಾರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದರು.

ಸಭೆಯಲ್ಲಿ ಪಕ್ಷಗಳ ಮುಖಂಡರು ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದರು. ಏಕೆಂದರೆ ಇದು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಈ ಮೀಸಲಾತಿಯು ಸುಪ್ರೀಂ ಕೋರ್ಟ್‌ನ ಹಿಂದಿನ ವಿವಿಧ ತೀರ್ಪುಗಳಿಗೆ ವಿರುದ್ಧವಾಗಿದೆ. ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಮತ್ತು ತಮಿಳುನಾಡು ಸರ್ಕಾರವು ತನ್ನ ಬಲವಾದ ವಾದವನ್ನು ಮಂಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ಸ್ವಾಗತಿಸಿದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರತಿನಿಧಿಗಳು ಡಿಎಂಕೆ ಸರ್ಕಾರ ರಾಜ್ಯದಲ್ಲಿ ತೆಗೆದುಕೊಂಡ ನಿಲುವನ್ನು ಬೆಂಬಲಿಸಿದರು. ಈ ಮೀಸಲಾತಿಯಲ್ಲಿ ಡಿಎಂಕೆ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಪ್ರತಿಪಾದಿಸಿದ ಎಐಎಡಿಎಂಕೆ ಹಾಗೂ ಈ ಮೀಸಲಾತಿಯನ್ನು ಸ್ವಾಗತಿಸಿದ ಬಿಜೆಪಿ ಇಂದಿನ ಸಭೆಯನ್ನು ಬಹಿಷ್ಕರಿಸಿವೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಅವರು, ಇಡಬ್ಲ್ಯೂಎಸ್‌ಗೆ ಶೇ. 10 ರಷ್ಟು ಮೀಸಲಾತಿಯನ್ನು ಒಪ್ಪಿಕೊಳ್ಳುವುದರಿಂದ ಸಾಮಾಜಿಕ ನ್ಯಾಯದ ಮೂಲವನ್ನೇ ಅಸ್ಥಿರಗೊಳಿಸಲು ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT