ರಾಜನಾಥ್ ಸಿಂಗ್ 
ದೇಶ

ಏನಿದು ಜಿ20 ಲೋಗೋ ವಿವಾದ?:ನಮ್ಮ ಸಂಸ್ಕೃತಿಯನ್ನು ಮರೆತುಬಿಡಬೇಕೇ? ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದೇಕೆ?

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ20 ಶೃಂಗಸಭೆಯ ಲೋಗೋ ವಿವಾದದ ಬಗ್ಗೆ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಂಸ್ಕೃತಿಯನ್ನು ನಾವು ಮರೆತುಬಿಡಬೇಕೇ? ಎಂದು ಗುಡುಗಿದ್ದಾರೆ. 

ಹರ್ಯಾಣ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ20 ಶೃಂಗಸಭೆಯ ಲೋಗೋ ವಿವಾದದ ಬಗ್ಗೆ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಂಸ್ಕೃತಿಯನ್ನು ನಾವು ಮರೆತುಬಿಡಬೇಕೇ? ಎಂದು ಗುಡುಗಿದ್ದಾರೆ. 

ಶೃಂಗಸಭೆಯ ಲೋಗೋದಲ್ಲಿ ನಿರ್ದಿಷ್ಟ ಪಕ್ಷದ ಚಿಹ್ನೆಯನ್ನು ಹೋಲುತ್ತದೆ ಎಂಬ ಕಾರಣಕ್ಕಾಗಿ ನಮ್ಮ ಸಂಸ್ಕೃತಿಯನ್ನು ಮರೆತುಬಿಡಬೇಕೇ? ಎಂದು ರಾಜನಾಥ್ ಸಿಂಗ್ ಪ್ರಶ್ನಿಸಿದ್ದು, ಜಿ20 ಶೃಂಗಸಭೆಯ ಲೋಗೋ ಬಗ್ಗೆ ಚರ್ಚೆಗಳಾಗುತ್ತಿವೆ. ಪ್ರಧಾನಿ ಮೋದಿ ಲೋಗೋ ಮೇಲೆ ತಮ್ಮ ಪಕ್ಷದ ಚಿಹ್ನೆಯನ್ನು ಹಾಕಿದ್ದಾರೆ ಎಂದು ಆರೋಪಿಸಲಾಗುತ್ತಿದೆ. 1857 ರಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಒಂದು ಕೈಲಿ ರೋಟಿ (ಚಪಾತಿ) ಹಿಡಿದಿದ್ದರೆಮತ್ತೊಂದು ಕೈಲಿ ಕಮಲ ಹಿಡಿದಿದ್ದರು ಎಂಬುದು ಈ ರೀತಿ ಆರೋಪ ಮಾಡುತ್ತಿರುವವರಿಗೆ ಮರೆತುಹೋಗಿದೆ? ಎಂದು ರಕ್ಷಣಾ ಸಚಿವರು ಪ್ರಶ್ನಿಸಿದ್ದಾರೆ.
 
ಕಮಲ ನಮ್ಮ ರಾಷ್ಟ್ರೀಯ ಹೂವು ಎಂಬ ವಾಸ್ತವದ ಹೊರತಾಗಿ ಅದು ನಮ್ಮ ಪಕ್ಷದ ಚಿಹ್ನೆಯಾಗಿದೆ ಎಂಬ ಒಂದೇ ಕಾರಣಕ್ಕೆ ನಮ್ಮ ಸಂಸ್ಕೃತಿಯನ್ನು ಮರೆಯಬೇಕೆ? ಎಂದು ರಾಜನಾಥ್ ಸಿಂಗ್ ಕೇಳಿದ್ದಾರೆ. ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಪ್ರಧಾನಿ ಮೋದಿ ಮಂಗಳವಾರದಂದು ವಿಡಿಯೋ ಕಾಫರೆನ್ಸ್ ಮೂಲಕ ಲೋಗೋ ಬಿಡುಗಡೆ ಮಾಡಿದ್ದರು. 

ಸರ್ಕಾರ ಲೋಗೋ ಬಗ್ಗೆ ಸ್ಪಷ್ಟನೆ ನೀಡಿದ್ದು, ಭಾರತೀಯ ರಾಷ್ಟ್ರೀಯ ಧ್ವಜದಿಂದ ರೋಮಾಂಚಕ ಬಣ್ಣಗಳಿಂದ ಸ್ಫೂರ್ತಿ ಪಡೆದು ಲೋಗೋ ಸಿದ್ಧಪಡಿಸಲಾಗಿದೆ. ಸವಾಲುಗಳ ನಡುವೆ ಬೆಳವಣಿಗೆಯನ್ನು ಪ್ರತಿಬಿಂಬಿಸುವ ಭಾರತದ ರಾಷ್ಟ್ರೀಯ ಪುಷ್ಪವಾದ ಕಮಲದೊಂದಿಗೆ ಭೂಮಿಯನ್ನು ಜೋಡಿಸುವ ಸಂಕೇತವನ್ನು ಈ ಲೋಗೋ ಹೊಂದಿದೆ ಎಂದು ಸರ್ಕಾರ ಹೇಳಿದೆ.
 
ಲೋಗೋ ಬಗ್ಗೆ ಆಕ್ಷೇಪವೆತ್ತಿರುವ ಕಾಂಗ್ರೆಸ್ ನ ನಾಯಕ ಹಾಗೂ ವಕ್ತಾರ ಜೈರಾಮ್ ರಮೇಶ್, "ಬಿಜೆಪಿ ಹಾಗೂ ಪ್ರಧಾನಿಗಳು ತಮ್ಮನ್ನು ನಾಚಿಕೆಗೇಡಿನ ರೀತಿಯಲ್ಲಿ ತಮ್ಮನ್ನು ಪ್ರಚಾರ ಮಾಡಿಕೊಳ್ಳುವ ಯಾವ ಅವಕಾಶವನ್ನೂ ಬಿಟ್ಟುಕೊಡುವುದಿಲ್ಲ" ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT