ಪ್ರಶಾಂತ್ ಕಿಶೋರ್ 
ದೇಶ

ಎಂದಿಗೂ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಪ್ರಶಾಂತ್ ಕಿಶೋರ್

ರಾಜಕೀಯ ತಂತ್ರಜ್ಞ-ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಶನಿವಾರ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಳ್ಳಿಹಾಕಿದರು. ಆದರೆ ತಮ್ಮ ತವರು ರಾಜ್ಯ ಬಿಹಾರಕ್ಕೆ 'ಉತ್ತಮ ಪರ್ಯಾಯ ಆಯ್ಕೆ' ನೀಡುವ ಭರವಸೆಯನ್ನು ಪುನರುಚ್ಚರಿಸಿದರು.

ಬೆಟ್ಟಿಯಾ(ಬಿಹಾರ): ರಾಜಕೀಯ ತಂತ್ರಜ್ಞ-ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಶನಿವಾರ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಳ್ಳಿಹಾಕಿದರು. ಆದರೆ ತಮ್ಮ ತವರು ರಾಜ್ಯ ಬಿಹಾರಕ್ಕೆ 'ಉತ್ತಮ ಪರ್ಯಾಯ ಆಯ್ಕೆ' ನೀಡುವ ಭರವಸೆಯನ್ನು ಪುನರುಚ್ಚರಿಸಿದರು. 

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐ-ಪಿಎಸಿ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಜೆಡಿಯು ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಸ್ತವವಾಗಿ, ಪ್ರಶಾಂತ್ ಕಿಶೋರ್ ಸ್ವಲ್ಪ ರಾಜಕೀಯ ಚಾಣಾಕ್ಷತನವನ್ನು ಹೊಂದಿರುವ 'ದಂದೆಬಾಜ್'(ವ್ಯಾಪಾರಿ) ಎಂದು ಆರೋಪಿಸಿ ಜೆಡಿಯು ನಾಯಕರ ವಿರುದ್ಧ ಪಿಕೆ ಸಾಕಷ್ಟು ಅಸಮಾಧಾನಗೊಂಡಿದ್ದು ಅಲ್ಲದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನನ್ನು ಎರಡು ವರ್ಷಗಳ ಕಾಲ ತಮ್ಮ ನಿವಾಸದಲ್ಲಿ ಏಕೆ ಇಟ್ಟುಕೊಂಡಿದ್ದರು ಎಂದು ಜೆಡಿಯು ನಾಯಕರಿಗೆ ಸವಾಲು ಹಾಕಿದರು.

ಪ್ರಶಾಂತ್ ಕಿಶೋರ್ ಅವರಿಗೆ ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯನ್ನು ಪದೇ ಪದೇ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ನಾನೇಕೆ ಚುನಾವಣೆಗೆ ಸ್ಪರ್ಧಿಸುತ್ತೇನೆ? ನನಗೆ ಅಂತಹ ಆಕಾಂಕ್ಷೆ ಇಲ್ಲ ಎಂದರು. 

'ಜನ ಸೂರಜ್' ಅಭಿಯಾನವನ್ನು ರಾಜಕೀಯ ಪಕ್ಷವನ್ನಾಗಿ ಮಾಡಬೇಕೇ ಎಂಬ ಬಗ್ಗೆ ಈ ಸಮಾವೇಶದಲ್ಲಿ ಜನರ ಅಭಿಪ್ರಾಯ ತೆಗೆದುಕೊಳ್ಳಲಾಗುವುದು. ರಾಜ್ಯದ 3,500 ಕಿ.ಮೀ ಉದ್ದದ 'ಪಾದಯಾತ್ರೆ'ಗೆ ಆಗಮಿಸಿದ ಕಿಶೋರ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ರೀತಿಯ ಅಭಿಪ್ರಾಯ ಸಂಗ್ರಹಣೆ ನಡೆಯಲಿದ್ದು, ಅದರ ಆಧಾರದ ಮೇಲೆ ಮುಂದಿನ ಕಾರ್ಯತಂತ್ರವನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

ನಿತೀಶ್ ಕುಮಾರ್ ಅವರೊಂದಿಗೆ ಈ ಹಿಂದೆ ಕೆಲಸ ಮಾಡಿದ್ದಕ್ಕಾಗಿ ವಿಷಾದವಿಲ್ಲ. ನಿತೀಶ್ ಕುಮಾರ್ 10 ವರ್ಷಗಳ ಹಿಂದೆ ಇದ್ದದ್ದಕ್ಕೂ ಈಗ ಅವರು ಆಗಿದ್ದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು 2014ರಲ್ಲಿ ಕುರ್ಚಿ ತೊರೆದಿದ್ದರು. ಆದರೆ ಈಗ ಅಧಿಕಾರದಲ್ಲಿ ಉಳಿಯಲು ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ ಎಂದರು.

ಮಹಾಘಟಬಂಧನ್ ಸರ್ಕಾರದ ವಾರ್ಷಿಕ 10 ಲಕ್ಷ ಉದ್ಯೋಗಗಳ ಭರವಸೆಯನ್ನು ಲೇವಡಿ ಮಾಡಿದ ಕಿಶೋರ್, 'ನಾನು ಇದನ್ನು ಹಲವು ಬಾರಿ ಹೇಳಿದ್ದೇನೆ, ಮತ್ತೊಮ್ಮೆ ಹೇಳುತ್ತೇನೆ. ಅವರು ಭರವಸೆಯನ್ನು ಪೂರೈಸಿದರೆ, ನಾನು ನನ್ನ ಅಭಿಯಾನವನ್ನು ತ್ಯಜಿಸುತ್ತೇನೆ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT