ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುತ್ತಿರುವುದು. 
ದೇಶ

ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಸಂತ್ರಸ್ತ ವಿದ್ಯಾರ್ಥಿಯನ್ನು ಹಿಮಾಂಕ್ ಬನ್ಸಾಲ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿ ಹೈದರಾಬಾದ್‌ನ ಐಎಫ್‌ಎಚ್‌ಇ ಸಂಸ್ಥೆಯಲ್ಲಿ ಪದವಿಪೂರ್ವ ಕಾನೂನು ಪದವಿ ಪಡೆಯುತ್ತಿದ್ದರೆಂದು ವರದಿಗಳು ತಿಳಿಸಿವೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸೈಬರಾಬಾದ್ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳ ವಿರುದ್ಧ  307 (ಕೊಲೆ ಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ), 342 (ಅಕ್ರಮ ಬಂಧನಕ್ಕೆ ಶಿಕ್ಷೆ), 450 (ಯಾವುದೇ ಅಪರಾಧವನ್ನು ಮಾಡುವ ಸಲುವಾಗಿ ಮನೆ-ಅತಿಕ್ರಮಣ ಮಾಡಿದವರು), 506 (ಅಕ್ರಮ) ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 149 (ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಅಪರಾಧದ ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ತಪ್ಪಿತಸ್ಥರು) ಭಾರತೀಯ ದಂಡ ಸಂಹಿತೆ (IPC) ಮತ್ತು ಸೆಕ್ಷನ್ 4(I),(II), ಮತ್ತು (III) ನಿಷೇಧ 2011 ರ ರೈಸಿಂಗ್ ಆಕ್ಟ್ ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ನವೆಂಬರ್ 1 ರಂದು ಹಿಮಾಂಕ್ ಪ್ರಾಫೆಟ್‌ ಮೊಹಮ್ಮದ್‌ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ ನಂತರ ಈ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಪೊಲೀಸರಿಗೆ ದೂರು ನೀಡಿದ್ದ ವಿದ್ಯಾರ್ಥಿ ತನ್ನ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT