ವಿಜಯ್ ನಾಯರ್ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಆಪ್ ನಾಯಕ ವಿಜಯ್ ನಾಯರ್, ಉದ್ಯಮಿ ಅಭಿಷೇಕ್ ಬಂಧಿಸಿದ ಇಡಿ

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಯ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಆಮ್ ಆದ್ಮಿ ಪಕ್ಷದ(ಎಎಪಿ) ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಉದ್ಯಮಿ ಅಭಿಷೇಕ್...

ನವದೆಹಲಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಯ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಆಮ್ ಆದ್ಮಿ ಪಕ್ಷದ(ಎಎಪಿ) ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಉದ್ಯಮಿ ಅಭಿಷೇಕ್ ಬೋಯಿನ್‌ಪಲ್ಲಿ ಅವರನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.

ಕಳೆದ ವಾರ ಕೇಂದ್ರ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟ ಇತರ ಆರೋಪಿಗಳಾದ ಪಿ ಶರತ್ ಸಿ ರೆಡ್ಡಿ ಮತ್ತು ಬಿನೋಯ್ ಬಾಬು ಸೇರಿದಂತೆ ಎಲ್ಲಾ ಆರೋಪಿಗಳನ್ನು ಪರಸ್ಪರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಓನ್ಲಿ ಮಚ್ ಲೌಡರ್ (ಒಎಂಎಲ್) ಎಂಬ ಮನರಂಜನಾ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಮಾಜಿ ಸಿಇಒ ನಾಯರ್ ಅವರನ್ನು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರೆ, ಹೈದರಾಬಾದ್ ಮೂಲದ ಉದ್ಯಮಿ ಬೋಯಿನ್‌ಪಲ್ಲಿ ಅವರನ್ನು ಕಳೆದ ತಿಂಗಳು ಬಂಧಿಸಿತ್ತು.

ಸಿಬಿಐ ವಿಚಾರಣೆಯ ನಂತರ ಕಳೆದ ತಿಂಗಳು ಈ ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಇದೀಗ ಇಡಿ ತನ್ನ ವಶಕ್ಕೆ ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT