ಪ್ರಾತಿನಿಧಿಕ ಚಿತ್ರ 
ದೇಶ

ಕೋಲ್ಕತ್ತಾದ ಬಂಗಲೆಯಲ್ಲಿ ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ನಾಲ್ವರಿಂದ ಅತ್ಯಾಚಾರ

ಕೋಲ್ಕತ್ತಾದ ಉತ್ತರ ಹೊರವಲಯ ರಾಜರ್‌ಹತ್‌ನಲ್ಲಿರುವ ಬಂಗಲೆಯಲ್ಲಿ ಆಯೋಜಿಸಲಾಗಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ 21 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ಕೋಲ್ಕತ್ತಾ: ಕೋಲ್ಕತ್ತಾದ ಉತ್ತರ ಹೊರವಲಯ ರಾಜರ್‌ಹತ್‌ನಲ್ಲಿರುವ ಬಂಗಲೆಯಲ್ಲಿ ಆಯೋಜಿಸಲಾಗಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ 21 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ಪಾರ್ಟಿಯಲ್ಲಿ ಮತ್ತು ಬರುವ ಪಾನೀಯವನ್ನು ನೀಡಿ ಪ್ರಜ್ಞೆ ತಪ್ಪಿದ ನಂತರ ನಾಲ್ವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಶುಕ್ರವಾರ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, 'ಗುರುವಾರ ರಾತ್ರಿ ವೇದಿಕ್ ಗ್ರಾಮದಲ್ಲಿ ನಡೆದ ಪಾರ್ಟಿಗೆ ನನ್ನ ಸ್ನೇಹಿತೆ ಆಹ್ವಾನ ನೀಡಿದ್ದಳು. ಆಕೆ ಆರೋಪಿಗಳಲ್ಲಿ ಒಬ್ಬನಿಗೆ ಸ್ನೇಹಿತೆಯಾಗಿದ್ದಳು. ಪಾರ್ಟಿಯಲ್ಲಿ ಮಹಿಳೆಯರು ಸೇರಿದಂತೆ 10 ಕ್ಕೂ ಹೆಚ್ಚು ಜನರಿದ್ದರು. ಈ ವೇಳೆ ನಾಲ್ವರು ಪುರುಷರು ನನಗೆ ಮತ್ತು ಬರುವ ಪಾನೀಯವನ್ನು ನೀಡಿದ ನಂತರ ಸರದಿಯಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

'ರಾತ್ರಿ ತನ್ನ ಮೇಲೆ ಅತ್ಯಾಚಾರ ನಡೆದಿರುವುದನ್ನು ಅರಿತ ಆಕೆ ಶುಕ್ರವಾರ ಬೆಳಗ್ಗೆ ಸ್ಥಳದಿಂದ ತೆರಳಿದ್ದಳು. ಕೂಡಲೇ ಶುಕ್ರವಾರ ರಾತ್ರಿ ದೂರು ದಾಖಲಿಸಿದ್ದಾಳೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಬಂಧಿಸಿ ಉತ್ತರ 24 ಪರಗಣದ ಬರಸಾತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

'ಬಂಗಲೆ ಮತ್ತು ರೆಸಾರ್ಟ್‌ನ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳ ಬಳಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಗಳನ್ನು ಸಂಗ್ರಹಿಸಿದ್ದೇವೆ. ತನಿಖಾಧಿಕಾರಿಗಳು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ' ಎಂದು ಬಿಧಾನನಗರ ಪೊಲೀಸ್ ಕಮಿಷನರ್ ಗೌರವ್ ಶರ್ಮಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT