ಬಿಜೆಪಿ ಲೋಗೋ 
ದೇಶ

ಮೈನ್‌ಪುರಿಯಿಂದ ಎಸ್‌ಪಿಯ ಡಿಂಪಲ್ ಯಾದವ್ ವಿರುದ್ಧ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ಕಣಕ್ಕೆ

ಸಮಾಜವಾದಿ ಪಕ್ಷದ (ಎಸ್‌ಪಿ) ಡಿಂಪಲ್ ಯಾದವ್ ವಿರುದ್ಧ ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯ ಮಾಜಿ ಸಂಸದ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಕಣಕ್ಕಿಳಿಸಿದೆ.

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಡಿಂಪಲ್ ಯಾದವ್ ವಿರುದ್ಧ ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯ ಮಾಜಿ ಸಂಸದ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಕಣಕ್ಕಿಳಿಸಿದೆ.

ಶಾಕ್ಯಾ ಅವರು ಒಂದು ಕಾಲದಲ್ಲಿ ಶಿವಪಾಲ್ ಯಾದವ್ ಅವರ ನಿಕಟ ಸಹವರ್ತಿಯಾಗಿದ್ದರು. ಆದರೆ, ಈ ವರ್ಷದ ಆರಂಭದಲ್ಲಿ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಇದಕ್ಕೂ ಮೊದಲು ಅವರು ಸಮಾಜವಾದಿ ಪಕ್ಷ (ಎಸ್‌ಪಿ) ಯಲ್ಲಿದ್ದರು ಮತ್ತು ಶಿವಪಾಲ್ ಅವರು ತಮ್ಮದೇ ಆದ ಪಕ್ಷವನ್ನು ಸ್ಥಾಪಿಸಿದ ನಂತರ ಅವರ ಪರವಾಗಿ ನಿಂತರು.

ಎಸ್‌ಪಿಯ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಸಮಾಜವಾದಿ ಪಕ್ಷದಿಂದ ಡಿಂಪಲ್ ಯಾದವ್ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಇತ್ತೀಚೆಗೆ ಎಸ್‌ಪಿಯ ಭದ್ರಕೋಟೆಗಳು ಎನಿಸಿದ್ದ ಅಜಂಗಢ ಮತ್ತು ರಾಂಪುರ ಲೋಕಸಭಾ ಕ್ಷೇತ್ರಗಳನ್ನು ಯಶಸ್ವಿಯಾಗಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದು, ಮೈನ್‌ಪುರಿಯಲ್ಲಿಯೂ ಅದೇ ರೀತಿ ಮಾಡಲು ಯತ್ನಿಸುತ್ತಿದೆ. ಶಿವಪಾಲ್ ಯಾದವ್ ಅವರ ಸೋದರಳಿಯ ಮತ್ತು ಎಸ್‌ಪಿ ಅಧ್ಯಕ್ಷರಾಗಿರುವ ಅಖಿಲೇಶ್ ಯಾದವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಯಾದವ್ ಕುಟುಂಬದಲ್ಲಿನ ಒಡಕುಗಳು ಬಿಜೆಪಿಯ ಭರವಸೆಯನ್ನು ಹೆಚ್ಚಿಸಿವೆ.

ಉತ್ತರ ಪ್ರದೇಶದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಬಿಹಾರ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ತಲಾ ಒಂದು ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಹೆಸರಿಸಿದೆ.

ಕ್ರಮವಾಗಿ ಖತೌಲಿ ಮತ್ತು ರಾಂಪುರದಿಂದ ರಾಜಕುಮಾರಿ ಸೈನಿ ಮತ್ತು ಆಕಾಶ್ ಸಕ್ಸೇನಾ, ಬಿಹಾರದ ಕುರ್ಹಾನಿಯಿಂದ ಕೇದಾರ್ ಪ್ರಸಾದ್ ಗುಪ್ತಾ, ರಾಜಸ್ಥಾನದ ಸರ್ದಾರ್ಶಹರ್‌ನಿಂದ ಅಶೋಕ್ ಕುಮಾರ್ ಪಿಂಚಾ ಮತ್ತು ಛತ್ತೀಸ್‌ಗಢದ ಭಾನುಪ್ರತಾಪುರದಿಂದ ಬ್ರಹ್ಮಾನಂದ್ ನೇತಮ್ ಅವರನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT