ನಾಮಪತ್ರ ವಾಪಸ್ ಪಡೆದ ಆಪ್ ಅಭ್ಯರ್ಥಿ ಹಾಗೂ ಕೇಜ್ರಿವಾಲ್. 
ದೇಶ

ಗುಜರಾತ್: ನನ್ನ ಆತ್ಮಸಾಕ್ಷಿಯಂತೆ ನಡೆದುಕೊಂಡಿದ್ದೇನೆ; ನಾಮಪತ್ರ ಹಿಂಪಡೆದ ಆಪ್‌ ನ 'ಅಪಹೃತ' ಅಭ್ಯರ್ಥಿ

ಗುಜರಾತ್‌ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಯ ಒತ್ತಾಯದ ಮೇರೆಗೆ ಅವರನ್ನು ಅಪಹರಿಸಿ ಒತ್ತಡ ಹೇರಲಾಗಿದೆ ಎಂದು ಎಎಪಿ ಆರೋಪಿಸಿದೆ.

ಅಹಮದಾಬಾದ್/ದೆಹಲಿ: ಗುಜರಾತ್‌ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಯ ಒತ್ತಾಯದ ಮೇರೆಗೆ ಅವರನ್ನು ಅಪಹರಿಸಿ ಒತ್ತಡ ಹೇರಲಾಗಿದೆ ಎಂದು ಎಎಪಿ ಆರೋಪಿಸಿದೆ. ಆದರೆ ಇದನ್ನು ಆಡಳಿತ ಪಕ್ಷ ನಿರಾಕರಿಸಿದೆ.

ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರು ಯಾವುದೇ ಒತ್ತಡವಿಲ್ಲದೆ ನಾಮಪತ್ರ ಹಿಂಪಡೆದಿದ್ದಾರೆ ಎಂದು ಹೇಳಲಾದ ವೀಡಿಯೊ ಹೇಳಿಕೆಯನ್ನು ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಯತ್ನಿಸಲಾಗಿದೆ.

ಕ್ಷೇತ್ರದ ಜನ ನನ್ನನ್ನು "ದೇಶ ವಿರೋಧಿ" ಮತ್ತು "ಗುಜರಾತ್ ವಿರೋಧಿ" ಎಂದು ಆರೋಪಿಸಿದ ನಂತರ ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ. ಎಎಪಿಯಿಂದ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲಿಸುವುದಿಲ್ಲ ಎಂದು ಕ್ಷೇತ್ರದ ಜನ ಬೆದರಿಕೆ ಹಾಕಿದರು ಎಂದು ಕಾಂಚನ್ ಜರಿವಾಲಾ ಹೇಳಿದ್ದಾರೆ.

ಎಎಪಿ ಗುಜರಾತ್ ಮುಖ್ಯ ಚುನಾವಣಾ ಅಧಿಕಾರಿ(ಸಿಇಒ) ಪಿ ಭಾರತಿ ಅವರಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದು, ಇಡೀ ಘಟನೆಯ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಈ ಬೆಳವಣಿಗೆಯ ನಡುವೆ, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಸ್ಲಾಮ್ ಸೈಕಲ್‌ವಾಲಾ ಅವರು ಎಎಪಿ ಬೆಂಬಲವನ್ನು ಕೋರಿ ಬಹಿರಂಗ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!