ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ನೌಕಾ ವಿಶ್ವವಿದ್ಯಾಲಯದ ನಿರ್ದಿಷ್ಟ ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ: ಕೇಂದ್ರ ಸರ್ಕಾರ

ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ನವದೆಹಲಿ: ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಭಾರತೀಯ ನೌಕಾಪಡೆಯ ವಿಶ್ವವಿದ್ಯಾನಿಲಯದ ಪ್ರವೇಶ ಯೋಜನೆಯಡಿಯಲ್ಲಿ ಕಾರ್ಯನಿರ್ವಾಹಕ ಶಾಖೆಯ ಸಾಮಾನ್ಯ ಸೇವೆ (X) ಕೇಡರ್, ಐಟಿ ಮತ್ತು ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಶಾಖೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರದ ಸಲ್ಲಿಕೆಗಳನ್ನು ಗಮನಿಸಿದ ದೆಹಲಿ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು ಭಾರತೀಯ ನೌಕಾಪಡೆಯ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶವನ್ನು ಕೋರಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ, ಕೆಲವು ನೌಕಾ ವಿಶ್ವವಿದ್ಯಾಲಯಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು. 

ವಕೀಲ ಕುಶ್ ಕಲ್ರಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗಮನಿಸಿದ ದೆಹಲಿ ಹೈಕೋರ್ಟ್, ಸರ್ಕಾರದಿಂದ ಸಾಂಸ್ಥಿಕ ತಾರತಮ್ಯವಾಗಿದೆ ಎಂದು ಆರೋಪಿಸಿದೆ. ಪುರುಷ ಅಭ್ಯರ್ಥಿಗಳಿಗೆ ಸಮಾನವಾಗಿ ಮಹಿಳೆಯರ ಪ್ರವೇಶವನ್ನು ಅನುಮತಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಬೇಕೆಂದು ನಿರ್ದೇಶನ ಕೋರಿತ್ತು.

ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರವನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ಸೇವಾ ವಿಷಯದ ಮೇಲೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯು ಸಮರ್ಥನೀಯವಲ್ಲ ಎಂದು ವಾದಿಸಿದರು.

ಆದಾಗ್ಯೂ, ಭಾರತೀಯ ನೌಕಾಪಡೆಯ ವಿಶ್ವವಿದ್ಯಾನಿಲಯ ಪ್ರವೇಶ ಯೋಜನೆ, ಕಾರ್ಯನಿರ್ವಾಹಕ ಶಾಖೆಯ ಜನರಲ್ ಸರ್ವಿಸ್ (x) ಕೇಡರ್, ಐಟಿ ಮತ್ತು ತಾಂತ್ರಿಕ ಶಾಖೆಯ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಅರ್ಜಿಯಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಯನ್ನು ಈಗಾಗಲೇ ನಿವಾರಿಸಲಾಗಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT