ಮೊರ್ಬಿ ಸೇತುವೆ 
ದೇಶ

ಮೋರ್ಬಿ ಸೇತುವೆ ದುರಂತ: ಅಫಿಡವಿಟ್ ಸಲ್ಲಿಸಿ ಇಲ್ಲವೇ ದಂಡ ಪಾವತಿಸಿ; ಮೋರ್ಬಿ ಪುರಸಭೆಗೆ ಗುಜರಾತ್ ಹೈಕೋರ್ಟ್ ತರಾಟೆ

135 ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗುಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ತಾನು ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಲು ವಿಫಲವಾದ ಮೋರ್ಬಿ ಪುರಸಭೆಯನ್ನು (ಎಂಎಂಸಿ) ಗುಜರಾತ್‌ ಹೈಕೋರ್ಟ್‌ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಅಹ್ಮದಾಬಾದ್: 135 ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗುಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ತಾನು ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಲು ವಿಫಲವಾದ ಮೋರ್ಬಿ ಪುರಸಭೆಯನ್ನು (ಎಂಎಂಸಿ) ಗುಜರಾತ್‌ ಹೈಕೋರ್ಟ್‌ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಇಂದು ಸಂಜೆಯೊಳಗೆ ಅಫಿಡವಿಟ್‌ ಸಲ್ಲಿಸಿ ಇಲ್ಲವೇ 1 ಲಕ್ಷ ರೂ ದಂಡ ಪಾವತಿಸಿ ಎಂದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರಿದ್ದ ಪೀಠ ಎಚ್ಚರಿಕೆ ನೀಡಿದೆ. “ಪ್ರಕರಣವನ್ನು ಲಘುವಾಗಿ ಪರಿಗಣಿಸುವುದನ್ನು ನಿಲ್ಲಿಸಿ. ಸಂಜೆಯೊಳಗೆ ಅಫಿಡವಿಟ್‌ ಸಲ್ಲಿಸಿ ಇಲ್ಲವೇ 1 ಲಕ್ಷ ರೂ ದಂಡ ಪಾವತಿಸಿ” ಎಂದು ಮುಖ್ಯ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಎಂಎಂಸಿ ಪರ ವಕೀಲರಿಗೆ ತಾಕೀತು ಮಾಡಿದರು. ವಕೀಲರು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ಪೀಠ ಈ ರೀತಿ ಪ್ರತಿಕ್ರಿಯಿಸಿತು.

ನೋಟಿಸ್ ಜಾರಿ ಮಾಡಿದ್ದರೂ ಮಹಾನಗರ ಪಾಲಿಕೆ ನ್ಯಾಯಾಲಯದ ಮುಂದೆ ಹಾಜರಾಗದೆ ಅತಿ ಬುದ್ಧಿವಂತಿಕೆ ತೋರುತ್ತಿದೆ ಎಂದು ಪೀಠ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿತ್ತು. ಪುರಸಭೆ ಜಿಲ್ಲಾಧಿಕಾರಿ ವ್ಯಾಪ್ತಿಗೆ ಬರಲಿದ್ದು ಅವರು ಚುನಾವಣಾ ಕರ್ತವ್ಯದಲ್ಲಿದ್ದಾರೆ. ಅವರಿಗೆ ನೋಟಿಸ್‌ ನೀಡುವ ಬದಲು ಪುರಸಭೆಗೆ ನೋಟಿಸ್‌ ನೀಡಲಾಗಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ವಿಳಂಬವಾಯಿತು ಎಂದು ವಕೀಲರು ವಿವರಿಸಿದ್ದರು.  

ಖಾಸಗಿ ಗುತ್ತಿಗೆದಾರರೊಡನೆ ಈ ಮೊದಲ ಒಪ್ಪಂದದ ಅವಧಿ ಮುಕ್ತಾಯಗೊಂಡ ನಂತರವೂ ಮೂರು ವರ್ಷಗಳವರೆಗೂ ಮೋರ್ಬಿ ತೂಗು ಸೇತುವೆಯ ನಿರ್ವಹಣೆಗೆ ಏಕೆ ಅನುಮತಿ ನೀಡಲಾಗಿತ್ತು ಎಂದು ಪೀಠ ನಿನ್ನೆ ಕಟುವಾಗಿ ಪ್ರಶ್ನಿಸಿತ್ತು.  ಅಕ್ಟೋಬರ್ 30ರಂದು ದುರಂತದ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಪೀಠ ಸರ್ಕಾರ ಅದರ ಮುಖ್ಯ ಕಾರ್ಯದರ್ಶಿ, ಮೋರ್ಬಿ ನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ (ಯುಡಿಡಿ), ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಪಕ್ಷಕಾರರನ್ನಾಗಿ ಮಾಡುವಂತೆ ನಿರ್ದೇಶಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT