ಭೂಗತ ಪಾತಕಿ ಛೋಟಾ ರಾಜನ್ 
ದೇಶ

2009ರ ಜೋಡಿ ಕೊಲೆ ಪ್ರಕರಣ: ಭೂಗತಪಾತಕಿ ಛೋಟಾ ರಾಜನ್ ಖುಲಾಸೆ

2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಮುಂಬೈ: 2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ವಿಶೇಷ ನ್ಯಾಯಾಧೀಶ ಎಎಂ ಪಾಟೀಲ್ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರನ್ನು ಖುಲಾಸೆಗೊಳಿಸಿದರು. ರಾಜನ್‌ಗೆ ಸಂಬಂಧಿಸಿದ ಪಿತೂರಿಯನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅವರು ಹೇಳಿದರು.ಈ ಪ್ರಕರಣದಲ್ಲಿ ಇತರ ಆರೋಪಿಗಳಾದ ಮೊಹಮ್ಮದ್ ಅಲಿ ಶೇಖ್, ಉಮೇದ್ ಶೇಖ್ ಮತ್ತು ಪ್ರಣಯ್ ರಾಣೆ ಅವರನ್ನು ಖುಲಾಸೆಗೊಳಿಸಲಾಗಿದೆ.

2009 ಜುಲೈನಲ್ಲಿ  ದಕ್ಷಿಣ ಮುಂಬೈನ ನಾಗ್ಪಾಡಾ ಪ್ರದೇಶದ ಫುಟ್‌ಪಾತ್‌ನಲ್ಲಿ ಮತ್ತೊಂದು ಗುಂಪಿನ ಸಹೀದ್ ಗುಲಾಮ್ ಹುಸೇನ್ ಆಲಿಯಾಸ್ ಛೋಟೆ ಮಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು. ಅಲ್ಲಿಂದ ಪರಾರಿಯಾಗುತ್ತಿದ್ದಾಗ ಇತರ ಮೂವರ ಮೇಲೆ ದಾಳಿಕೋರರರು ಗುಂಡಿನ ದಾಳಿ ನಡೆಸಿದ್ದರು. ಆಗ ಛೋಟೆ ಮಿಯಾನ್ ಮತ್ತು ಸಯೀದ್ ಅರ್ಷದ್ ಗಾಯಗೊಂಡು ಸಾವನ್ನಪ್ಪಿದ್ದರು.

ಈ ಹತ್ಯೆ ಪ್ರಕರಣದ ಸಂಚಿನ ಆರೋಪನ್ನು ಛೋಟಾ ರಾಜನ್ ಮೇಲೆ ಹೊರಿಸಲಾಗಿತ್ತು.  ರಾಜನ್, ಇನ್ನೂ ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಕಾರಣ ಜೈಲಿನಿಂದ ಹೊರಬರುವುದಿಲ್ಲ. ಪತ್ರಕರ್ತ ಜೆ ಡೇ ಹತ್ಯೆ ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT