ಭೂಗತ ಪಾತಕಿ ಛೋಟಾ ರಾಜನ್ 
ದೇಶ

2009ರ ಜೋಡಿ ಕೊಲೆ ಪ್ರಕರಣ: ಭೂಗತಪಾತಕಿ ಛೋಟಾ ರಾಜನ್ ಖುಲಾಸೆ

2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಮುಂಬೈ: 2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ವಿಶೇಷ ನ್ಯಾಯಾಧೀಶ ಎಎಂ ಪಾಟೀಲ್ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರನ್ನು ಖುಲಾಸೆಗೊಳಿಸಿದರು. ರಾಜನ್‌ಗೆ ಸಂಬಂಧಿಸಿದ ಪಿತೂರಿಯನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅವರು ಹೇಳಿದರು.ಈ ಪ್ರಕರಣದಲ್ಲಿ ಇತರ ಆರೋಪಿಗಳಾದ ಮೊಹಮ್ಮದ್ ಅಲಿ ಶೇಖ್, ಉಮೇದ್ ಶೇಖ್ ಮತ್ತು ಪ್ರಣಯ್ ರಾಣೆ ಅವರನ್ನು ಖುಲಾಸೆಗೊಳಿಸಲಾಗಿದೆ.

2009 ಜುಲೈನಲ್ಲಿ  ದಕ್ಷಿಣ ಮುಂಬೈನ ನಾಗ್ಪಾಡಾ ಪ್ರದೇಶದ ಫುಟ್‌ಪಾತ್‌ನಲ್ಲಿ ಮತ್ತೊಂದು ಗುಂಪಿನ ಸಹೀದ್ ಗುಲಾಮ್ ಹುಸೇನ್ ಆಲಿಯಾಸ್ ಛೋಟೆ ಮಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು. ಅಲ್ಲಿಂದ ಪರಾರಿಯಾಗುತ್ತಿದ್ದಾಗ ಇತರ ಮೂವರ ಮೇಲೆ ದಾಳಿಕೋರರರು ಗುಂಡಿನ ದಾಳಿ ನಡೆಸಿದ್ದರು. ಆಗ ಛೋಟೆ ಮಿಯಾನ್ ಮತ್ತು ಸಯೀದ್ ಅರ್ಷದ್ ಗಾಯಗೊಂಡು ಸಾವನ್ನಪ್ಪಿದ್ದರು.

ಈ ಹತ್ಯೆ ಪ್ರಕರಣದ ಸಂಚಿನ ಆರೋಪನ್ನು ಛೋಟಾ ರಾಜನ್ ಮೇಲೆ ಹೊರಿಸಲಾಗಿತ್ತು.  ರಾಜನ್, ಇನ್ನೂ ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಕಾರಣ ಜೈಲಿನಿಂದ ಹೊರಬರುವುದಿಲ್ಲ. ಪತ್ರಕರ್ತ ಜೆ ಡೇ ಹತ್ಯೆ ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

SCROLL FOR NEXT