ಹತ್ಯೆಯಾದ ಶ್ರದ್ಧಾ, ಆರೋಪಿ ಆಫ್ತಾಬ್ 
ದೇಶ

ಶ್ರದ್ಧಾ ಹತ್ಯೆ ಪ್ರಕರಣ: ಆಫ್ತಾಬ್ ಗೆ ನಾರ್ಕೋ ಪರೀಕ್ಷೆ ನಡೆಸಲು ಕೋರ್ಟ್ ಅನುಮತಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾಳ ಕೊಲೆ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ದೆಹಲಿಯ ನ್ಯಾಯಾಲಯವೊಂದು ಗುರುವಾರ ಅನುಮತಿ ನೀಡಿದೆ.

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾಳ ಕೊಲೆ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ದೆಹಲಿಯ ನ್ಯಾಯಾಲಯವೊಂದು ಗುರುವಾರ ಅನುಮತಿ ನೀಡಿದೆ.

ಆರೋಪಿಯನ್ನು ಮಾದಕ ದ್ರವ್ಯ ಸೇವನೆ (ನಾರ್ಕೋ) ಪರೀಕ್ಷೆಗೆ ಒಳಪಡಿಸಲು ಅವಕಾಶ ನೀಡಿದೆ. ಈ ಸಂಬಂಧ ಪೊಲೀಸರ ಮನವಿಗೆ ಸಮ್ಮತಿಸಿ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಈ ಆದೇಶ ಹೊರಡಿಸಿದ್ದಾರೆ.

ಇಪ್ಪತ್ತೆಂಟರ ಹರೆಯದ ಪೂನಾವಾಲಾ ಶ್ರದ್ಧಾಳನ್ನುಕೊಲೆ ಮಾಡಿ. ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಮಾಡಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದ  ಫ್ರಿಡ್ಜ್‌ನಲ್ಲಿ ಸುಮಾರು ಮೂರು ವಾರಗಳ ಕಾಲ ಇರಿಸಿದ್ದ ಆರೋಪಿ ಮಧ್ಯರಾತ್ರಿಯಲ್ಲಿ ದೇಹದ ತುಂಡುಗಳನ್ನು ಮೆಹ್ರೋಲಿಯ ಅರಣ್ಯದಲ್ಲಿ ಬಿಸಾಡಿದ್ದಾನೆ. 

ಪ್ರಿಯತಮೆ ಶ್ರದ್ಧಾಳ ನಡುವೆ ಆಗಾಗ್ಗೆ ಜಗಳವಾಗುತಿತ್ತು. ಇದೇ ಕಾರಣದಿಂದ ಪೂನಾವಾಲಾ ಮೇ 18 ರ ಸಂಜೆ 27 ವರ್ಷದ ಶ್ರದ್ಧಾಳನ್ನು ಕೊಂದಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಪ್ರತಿದಿನ ಭಯಾನಕ ಸತ್ಯಗಳು ಹೊರಬರುತ್ತಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT