ಜಾನುವಾರಿಗೆ ಡಿಕ್ಕಿ ಹೊಡೆದು ಹಾನಿಗೀಡಾದ ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ಹಳಿಗಳ ಮೇಲೆ ರೈಲು ಡಿಕ್ಕಿ ಹೊಡೆದು ಜಾನುವಾರುಗಳ ಸಾವು: ಆವರಣ ಗೋಡೆ ನಿರ್ಮಿಸಲು ರೈಲ್ವೆ ಸಚಿವಾಲಯ ಒಪ್ಪಿಗೆ

ವಂದೇ ಭಾರತ್ ರೈಲಿನಡಿಗೆ ಸಿಲುಕಿ ದನಕರುಗಳು ಇತ್ತೀಚೆಗೆ ಸಾವಿಗೀಡಾಗಿರುವ ಘಟನೆಗಳು ನಡೆದಿತ್ತು. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಯಲು ರೈಲು ಮಾರ್ಗದ ಪಕ್ಕದಲ್ಲಿ 1 ಸಾವಿರ ಕಿಲೋ ಮೀಟರ್ ವರೆಗೆ ಮುಂದಿನ ಆರು ತಿಂಗಳುಗಳಲ್ಲಿ ಆವರಣ ಗೋಡೆ ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ. 

ನವದೆಹಲಿ: ವಂದೇ ಭಾರತ್ ರೈಲಿನಡಿಗೆ ಸಿಲುಕಿ ದನಕರುಗಳು ಇತ್ತೀಚೆಗೆ ಸಾವಿಗೀಡಾಗಿರುವ ಘಟನೆಗಳು ನಡೆದಿತ್ತು. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಯಲು ರೈಲು ಮಾರ್ಗದ ಪಕ್ಕದಲ್ಲಿ 1 ಸಾವಿರ ಕಿಲೋ ಮೀಟರ್ ವರೆಗೆ ಮುಂದಿನ ಆರು ತಿಂಗಳುಗಳಲ್ಲಿ ಆವರಣ ಗೋಡೆ ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ. 

ರೈಲು ಆವರಣ ತಡೆಗೋಡೆ ನಿರ್ಮಿಸುವ ವಿಷಯದಲ್ಲಿ ನಾವು ಗಂಭೀರವಾಗಿ ಕೆಲಸ ಮಾಡುತ್ತಿದ್ದೇವೆ. ಇದಕ್ಕಾಗಿ ಎರಡು ವಿಭಿನ್ನ ವಿನ್ಯಾಸಗಳನ್ನು ಪರಿಶೀಲಿಸಲಾಗುತ್ತಿದೆ. ಇದರಲ್ಲೊಂದು ವಿನ್ಯಾಸವನ್ನು ಅನುಮೋದಿಸಲಾಗಿದ್ದು, ಈ ವಿನ್ಯಾಸದ ಗೋಡೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಯಲು ಮುಂದಿನ ಐದರಿಂದ ಆರು ತಿಂಗಳುಗಳಲ್ಲಿ ವಿವಿಧ ವಿಭಾಗಗಳಲ್ಲಿ 1,000 ಕಿಮೀ ಗೋಡೆ ನಿರ್ಮಿಸಲು ಯೋಜಿಸಿದ್ದೇವೆ ಎಂದು ಕೇಂದ್ರ ಸಚಿವ ವೈಷ್ಣವ್ ಹೇಳಿದ್ದಾರೆ. 

ರೈಲ್ವೆ ಸಚಿವಾಲಯ ಅಂಕಿಅಂಶ ಪ್ರಕಾರ, ಈ ವರ್ಷ ಜಾನುವಾರು ಅಥವಾ ಮನುಷ್ಯರು ಹಳಿಗಳ ಮೇಲೆ ಬಂದು ಇಲಾಖೆಗೆ ಉಂಟಾದ ನಷ್ಟಗಳು ಹೆಚ್ಚಾಗಿವೆ. 2022ರ ಹಣಕಾಸು ವರ್ಷದಲ್ಲಿ 2,115 ರೈಲು ನಷ್ಟ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 2,650 ಪ್ರಕರಣ ವರದಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 26 ಸಾವಿರ ಜಾನುವಾರುಗಳು ಅಡ್ಡ ಬಂದ ಪ್ರಕರಣಗಳು ವರದಿಯಾಗಿವೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ, ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ: 27 ಕೋಟಿ ರೂ. ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!