ನವದೆಹಲಿ: ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಲಾಗುತ್ತಿದೆ ಎಂಬುದಕ್ಕೆ ಭಾರತ ಪುರಾವೆಗಳನ್ನು ಹೊಂದಿದೆ ಎಂದು ಎನ್ಐಎ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನಿಗ್ರಹದ ಬಗ್ಗೆ ಎರಡು ದಿನಗಳ ಅಂತರರಾಷ್ಟ್ರೀಯ ಸಚಿವರ ಸಮ್ಮೇಳನದಲ್ಲಿ ಈ ಚರ್ಚಿಸಲಾಗುವುದು ಎಂದು ಗುಪ್ತಾ ತಿಳಿಸಿದ್ದಾರೆ.
ಶುಕ್ರವಾರದಿಂದ ಪ್ರಾರಂಭವಾಗುವ ಸಮ್ಮೇಳನಕ್ಕೂ ಮೊದಲು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಪ್ತಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಚೀನಾ ಇನ್ನೂ ತನ್ನ ಉಪಸ್ಥಿತಿಯನ್ನು ಖಚಿತಪಡಿಸಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿ: ಭಾರತದಲ್ಲಿ ಭಯೋತ್ಪಾದನೆ ಕುಕೃತ್ಯಗಳಿಗೆ ದಾವೂದ್ ಇಬ್ರಾಹಿಂನಿಂದ ಹವಾಲಾ ಮೂಲಕ ಭಾರೀ ಮೊತ್ತದ ಹಣ ರವಾನೆ: ಎನ್ಐಎ
ಕೇಂದ್ರ ಗೃಹ ಸಚಿವಾಲಯ ಆಯೋಜಿಸಿರುವ ಭಯೋತ್ಪಾದನೆಗೆ ಹಣಕಾಸು ನಿಗ್ರಹ ಕುರಿತು ಉಗ್ರರಿಗೆ ಹಣವಿಲ್ಲ ಸಚಿವರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.