ಬಿ ಎಲ್ ಸಂತೋಷ್ 
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್.ಸಂತೋಷ್‌ಗೆ ಸಮನ್ಸ್, ಖುದ್ದು ಹಾಜರಾಗುವಂತೆ ಎಸ್ಐಟಿ ಸೂಚನೆ

ಬಿಜೆಪಿ ಸೇರುವಂತೆ ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಸಮನ್ಸ್ ಜಾರಿಗೆ ಮಾಡಿದೆ.

ಹೈದರಾಬಾದ್‌: ಬಿಜೆಪಿ ಸೇರುವಂತೆ ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಸಮನ್ಸ್ ಜಾರಿಗೆ ಮಾಡಿದೆ.

ನವೆಂಬರ್‌ 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​ ಸಂತೋಷ್​ ಅವರಿಗೆ ಹೈದರಾಬಾದ್‌ ಎಸ್‌ಐಟಿ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ಸಹ ನೀಡಿದೆ.

ಎಸ್ಐಟಿ ಸೆಕ್ಷನ್ 41(ಎ) ಅಡಿಯಲ್ಲಿ ಬಿಜೆಪಿ ನಾಯಕನಿಗೆ ನೋಟಿಸ್ ನೀಡಿದೆ. ಸಂತೋಷ್ ಅವರು ಹೇಳಿದ ದಿನಾಂಕ ಮತ್ತು ಸಮಯದಂದು ಎಸ್‌ಐಟಿ ಮುಂದೆ ಹಾಜರಾಗಲು ವಿಫಲವಾದರೆ ಅವರನ್ನು ಬಂಧಿಸಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 26ರಂದು ತೆಲಂಗಾಣದ ಸೈಬರಾಬಾದ್ ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ‌ ದಾಳಿ ಮಾಡಿದ್ದರು. ಈ ವೇಳೆ ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದರು. ಅಲ್ಲದೇ ಆಪರೇಷನ್ ಕಮಲಕ್ಕೆ ಈ ಹಣ ತರಲಾಗಿತ್ತು ಎನ್ನಲಾಗಿತ್ತು. ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಬಿಜೆಪಿ ಹಣದ ಆಮಿಷ ಒಡ್ಡಲಾಗಿತ್ತು. ಶಾಸಕರನ್ನು ಖರೀದಿಸಲು ತಂದಿದ್ದು ಎನ್ನಲಾದ 15 ಕೋಟಿ ರೂ. ಹಣದ ಜೊತೆಗೆ ಮೂವರನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT