ಸಂಗ್ರಹ ಚಿತ್ರ 
ದೇಶ

ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಕ್ಕೆ ಗುತ್ತಿಗೆದಾರರೇ ಹೊಣೆ: ಹೈಕೋರ್ಟ್

ಕಾಮಗಾರಿ ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವಂತೆ ಮೇಘಾಲಯ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಿಲ್ಲಾಂಗ್: ಕಾಮಗಾರಿ ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವಂತೆ ಮೇಘಾಲಯ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಬ್ಲ್ಯೂ ಡಿಯೆಂಗ್ಡೋಹ್ ಅವರ ವಿಭಾಗೀಯ ಪೀಠವು, ನಿಜವಾಗಿಯೂ, ರಾಜ್ಯವು ಒಂದು ರೀತಿಯ ವಾರಂಟಿಯನ್ನು ಪಡೆಯುವುದು ಒಳ್ಳೆಯದು ಎಂದು ಹೇಳಿದೆ.

ಪಶ್ಚಿಮ ಮೇಘಾಲಯದ ಅಜಿಯಾ-ಮೆಂಧಿಪಾರಾ-ಫುಲ್ಬರಿ-ತುರಾ(ಎಎಂಪಿಟಿ) ರಸ್ತೆಯ ನಿರ್ಮಾಣ ಮತ್ತು ದುರಸ್ತಿ ವಿಳಂಬದ ಹಿನ್ನೆಲೆಯಲ್ಲಿ ಎಎಚ್ ಹಜಾರಿಕಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಿತ್ತು.

ನಿರ್ಮಾಣ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆಗಳು ಹಾಳಾಗದಂತೆ ಗುತ್ತಿಗೆದಾರರಿಗೆ ಅಗತ್ಯವಿರುವ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಪೀಠವು ರಸ್ತೆ ವಿಸ್ತರಣೆಯ ನಿರ್ಮಾಣವನ್ನು ಮೇಲ್ವಿಚಾರಣೆ ಮಾಡುವ PWD (ರಸ್ತೆಗಳು) ಮೇಲ್ವಿಚಾರಕ ಎಂಜಿನಿಯರ್‌ಗೆ ನಿರ್ದೇಶನ ನೀಡಿದೆ. 

ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ರಾಜ್ಯ ಸರ್ಕಾರವು, ಕಾಮಗಾರಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. 41 ಕಿಮೀ ವ್ಯಾಪ್ತಿಯಲ್ಲಿ ಕನಿಷ್ಠ 33 ಕಿಮೀ ಪೂರ್ಣಗೊಂಡಿದೆ ಮತ್ತು ಉಳಿದ ಭಾಗಗಳಲ್ಲಿ ಕೆಲಸ ಭರದಿಂದ ಸಾಗಿದೆ ಎಂದು ಸಲ್ಲಿಸಿದೆ.

ಪ್ರಕರಣದ ಮುಂದಿನ ವಿಚಾರಣೆ ಮುಂದಿನ ವರ್ಷ ಫೆಬ್ರವರಿ 20ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT