ಸಂಗ್ರಹ ಚಿತ್ರ 
ದೇಶ

ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಕ್ಕೆ ಗುತ್ತಿಗೆದಾರರೇ ಹೊಣೆ: ಹೈಕೋರ್ಟ್

ಕಾಮಗಾರಿ ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವಂತೆ ಮೇಘಾಲಯ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಿಲ್ಲಾಂಗ್: ಕಾಮಗಾರಿ ಪೂರ್ಣಗೊಂಡ ನಂತರ ನಿಗದಿತ ಸಮಯದೊಳಗೆ ರಸ್ತೆಗಳು ಹಾಳಾದರೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವಂತೆ ಮೇಘಾಲಯ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಬ್ಲ್ಯೂ ಡಿಯೆಂಗ್ಡೋಹ್ ಅವರ ವಿಭಾಗೀಯ ಪೀಠವು, ನಿಜವಾಗಿಯೂ, ರಾಜ್ಯವು ಒಂದು ರೀತಿಯ ವಾರಂಟಿಯನ್ನು ಪಡೆಯುವುದು ಒಳ್ಳೆಯದು ಎಂದು ಹೇಳಿದೆ.

ಪಶ್ಚಿಮ ಮೇಘಾಲಯದ ಅಜಿಯಾ-ಮೆಂಧಿಪಾರಾ-ಫುಲ್ಬರಿ-ತುರಾ(ಎಎಂಪಿಟಿ) ರಸ್ತೆಯ ನಿರ್ಮಾಣ ಮತ್ತು ದುರಸ್ತಿ ವಿಳಂಬದ ಹಿನ್ನೆಲೆಯಲ್ಲಿ ಎಎಚ್ ಹಜಾರಿಕಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಿತ್ತು.

ನಿರ್ಮಾಣ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆಗಳು ಹಾಳಾಗದಂತೆ ಗುತ್ತಿಗೆದಾರರಿಗೆ ಅಗತ್ಯವಿರುವ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಪೀಠವು ರಸ್ತೆ ವಿಸ್ತರಣೆಯ ನಿರ್ಮಾಣವನ್ನು ಮೇಲ್ವಿಚಾರಣೆ ಮಾಡುವ PWD (ರಸ್ತೆಗಳು) ಮೇಲ್ವಿಚಾರಕ ಎಂಜಿನಿಯರ್‌ಗೆ ನಿರ್ದೇಶನ ನೀಡಿದೆ. 

ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ರಾಜ್ಯ ಸರ್ಕಾರವು, ಕಾಮಗಾರಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. 41 ಕಿಮೀ ವ್ಯಾಪ್ತಿಯಲ್ಲಿ ಕನಿಷ್ಠ 33 ಕಿಮೀ ಪೂರ್ಣಗೊಂಡಿದೆ ಮತ್ತು ಉಳಿದ ಭಾಗಗಳಲ್ಲಿ ಕೆಲಸ ಭರದಿಂದ ಸಾಗಿದೆ ಎಂದು ಸಲ್ಲಿಸಿದೆ.

ಪ್ರಕರಣದ ಮುಂದಿನ ವಿಚಾರಣೆ ಮುಂದಿನ ವರ್ಷ ಫೆಬ್ರವರಿ 20ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT