ಸಾಂದರ್ಭಿಕ ಚಿತ್ರ 
ದೇಶ

ದೇಹ ಕಾಣದಂತೆ 'ಓವರ್ ಕೋಟ್' ಧರಿಸಿ: ತಮಿಳುನಾಡು ಕಾಲೇಜು ಅಧ್ಯಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

ತಮಿಳುನಾಡಿನ ಎಲ್ಲಾ ಕಾಲೇಜು ಅಧ್ಯಾಪಕರು ತಮ್ಮ ದೇಹ ಕಾಣದಂತೆ  'ಓವರ್ ಕೋಟ್' ಧರಿಸುವಂತೆ ತಮಿಳುನಾಡು ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ ಪತ್ರ ಕಳುಹಿಸಿದ್ದು, ವಿದ್ಯಾರ್ಥಿಗಳಿಂದ ತಮ್ಮನ್ನು ಪ್ರತ್ಯೇಕಗೊಳಿಸಲು ಡ್ರಸ್ ಕೋಡ್ ಅನುಸರಿಸುವಂತೆ ಸಲಹೆ ನೀಡಲಾಗಿದೆ.

ಕೊಯಮತ್ತೂರು: ತಮಿಳುನಾಡಿನ ಎಲ್ಲಾ ಕಾಲೇಜು ಅಧ್ಯಾಪಕರು ತಮ್ಮ ದೇಹ ಕಾಣದಂತೆ  'ಓವರ್ ಕೋಟ್' ಧರಿಸುವಂತೆ ತಮಿಳುನಾಡು ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ ಪತ್ರ ಕಳುಹಿಸಿದ್ದು, ವಿದ್ಯಾರ್ಥಿಗಳಿಂದ ತಮ್ಮನ್ನು ಪ್ರತ್ಯೇಕಗೊಳಿಸಲು ಡ್ರಸ್ ಕೋಡ್ ಅನುಸರಿಸುವಂತೆ ಸಲಹೆ ನೀಡಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಪಿ. ಧನಶೇಖರ್ ಅಕ್ಟೋಬರ್ 18 ರಂದು ತಾಂತ್ರಿಕ ಶಿಕ್ಷಣದ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಈ ರೀತಿ ಸಲಹೆ ನೀಡಲಾಗಿದೆ. 

ಇದು ಉತ್ತಮ ನಿರ್ಧಾರವಾಗಿದೆ. ಈಗಾಗಲೇ ಅನೇಕ ಸ್ವಾಯತ್ತ ಕಾಲೇಜುಗಳಲ್ಲಿ ಮಹಿಳಾ ಸಿಬ್ಬಂದಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಓವರ್ ಕೋಟ್ ಧರಿಸಿದಾಗ ಮಹಿಳಾ ಸಿಬ್ಬಂದಿ ತರಗತಿಯಲ್ಲಿ ಆರಾಮದಾಯಕ ಅನ್ನಿಸುತ್ತದೆ. ಸಂಸ್ಥೆಯ ಒಳಗಡೆ ಮಹಿಳಾ ಸಿಬ್ಬಂದಿಯಲ್ಲಿಯೂ ಸಮಾನತೆಯ ಭಾವನೆ ಮೂಡುತ್ತದೆ ಎಂದು ಭಾರತಿಯಾರ್ ವಿಶ್ವವಿದ್ಯಾಲಯದ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ. ಪೊನ್ನುಸ್ವಾಮಿ ಹೇಳಿದ್ದಾರೆ. 

ಬೋಧಕ ಸಿಬ್ಬಂದಿ ಡ್ರೆಸ್ ಕೋಡ್ ಗೆ ನೀತಿ ಸಂಹಿತೆಯನ್ನು ಶಿಕ್ಷಣ ಇಲಾಖೆ ಮೊದಲು ಬಿಡುಗಡೆ ಮಾಡಬೇಕಾಗಿದೆ. ಟೈ ಧರಿಸದಿದ್ದಕ್ಕೆ ಎರಡು ವರ್ಷಗಳ ಹಿಂದೆ ರೂ. 500 ದಂಡ ಪಾವತಿಸಿದ್ದೇನೆ. ಇಂತಹ ನೀತಿ ರೂಪಿಸುವಾಗ ಮೊದಲಿಗೆ ವಸ್ತ್ರ ಸಂಹಿತೆಯ ನಿಯಮಗಳನ್ನು ಇಲಾಖೆ ರೂಪಿಸಬೇಕು ಎಂದು ಖಾಸಗಿ ಕಾಲೇಜೊಂದರ ಸಹಾಯಕ ಪ್ರೊಫೆಸರ್ ಕೆ. ನಾರಾಯಣನ್ ಒತ್ತಾಯಿಸಿದ್ದಾರೆ. 

ಸರ್ಕಾರಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಜಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ  ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಪಿ. ಧನಶೇಖರ್, ಆಯಾಯ ವಿಭಾಗಗಳ ನಿರ್ದೇಶಕರು ಈ ಬಗ್ಗೆ ನಿರ್ಧರಿಸಲಿದ್ದಾರೆ ಎಂದರು. ಆದಾಗ್ಯೂ,  ಪತ್ರದ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಎಂ. ಈಶ್ವರ್ ಮೂರ್ತಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT