ಹಾರ್ದಿಕ್ ಪಟೇಲ್ 
ದೇಶ

ಗುಜರಾತ್ ಚುನಾವಣೆ: 150ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು ಖಚಿತ- ಹಾರ್ದಿಕ್ ಪಟೇಲ್ ವಿಶ್ವಾಸ

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿರಾಮ್ ಗಂ ಕ್ಷೇತ್ರದ ಅಭ್ಯರ್ಥಿ ಹಾರ್ದಿಕ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿರಾಮ್ ಗಂ ಕ್ಷೇತ್ರದ ಅಭ್ಯರ್ಥಿ
 ಹಾರ್ದಿಕ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಎಎಪಿ, ಕಾಂಗ್ರೆಸ್ ಗುಜರಾತ್ ಸಂಸ್ಕೃತಿ ಮತ್ತು ಹೆಮ್ಮೆಗೆ ವಿರುದ್ದವಾಗಿವೆ. 7 ಕೋಟಿ ಗುಜರಾತ್ ಜನರು ಬಿಜೆಪಿಯನ್ನು ಇಷ್ಟಪಟ್ಟಿದ್ದಾರೆ. ಪ್ರತಿಯೊಬ್ಬ ಗುಜರಾತಿಗಳು ಗುಜರಾತ್ ಸರ್ಕಾರಕ್ಕೆ ಉಚಿತವಾಗಿ ವಿದ್ಯುತ್ ಪೂರೈಸುತ್ತಾರೆ. ಎಲ್ಲಾ ಮನೆಗಳು ಸೌರ ಫಲಕಗಳನ್ನು ಹೊಂದಿವೆ ಎಂದು  ಅವರು ತಿಳಿಸಿದರು. 

ಕಾಂಗ್ರೆಸ್ ಮಾತನ್ನು ಗುಜರಾತ್ ಜನರು ಕೇಳಲ್ಲ. ಕಾಂಗ್ರೆಸ್ ನಲ್ಲಿದ್ದಾಗ ಇದನ್ನು ನಾನು ನೋಡಿದ್ದೇನೆ. ಎಲ್ಲಾ ಸಮಯಗಳಲ್ಲಿಯೂ ಕಾಂಗ್ರೆಸ್ ಗುಜರಾತಿಗಳನ್ನು ಅವಮಾನಿಸಿದೆ ಮತ್ತು ರಾಜ್ಯದ ಹೆಮ್ಮೆಯನ್ನು ಪ್ರಶ್ನಿಸಿದೆ. ಇದನ್ನು ಗುಜರಾತ್ ಜನರು ಎಂದಿಗೂ ಸಹಿಸಲ್ಲ ಎಂದರು.

ಗುಜರಾತ್ ನನ್ನ ಜನ್ಮಭೂಮಿ, ಕರ್ಮಭೂಮಿ, ಮಾತೃಭೂಮಿಯಾಗಿದ್ದು, ಇಲ್ಲಿನ ಜನರನ್ನು ನನ್ನನ್ನು ಗೆಲ್ಲಿಸುವ ಅಚಲ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪರಿಸರ ಅಭಿವೃದ್ಧಿ ನೀತಿಯನ್ನು ಅನುಷ್ಠಾನಗೊಳಿಸುವತ್ತ ಕೆಲಸ ಮಾಡುತ್ತೇನೆ. ಬಿಜೆಪಿ ಕೊಡುವ ಜವಾಬ್ದಾರಿಯನ್ನು ಹೊರುತ್ತೇನೆ. ಪ್ರತಿಯೊಬ್ಬರನ್ನು ಒಟ್ಟಾಗಿ ತೆಗೆದುಕೊಳ್ಳುವ ಮೂಲಕ ಚುನಾವಣೆಯಲ್ಲಿ ಗೆದ್ದೆ ಗೆಲುತ್ತೇನೆ ಎಂದು ಹಾರ್ದಿಕ್ ಪಟೇಲ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT