ಪ್ರಾತಿನಿಧಿಕ ಚಿತ್ರ 
ದೇಶ

ಮುಂಬೈ: ಪ್ರೇಯಸಿಯನ್ನು ಕಟ್ಟಡದ ನೀರಿನ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲೆಗೆ ಯತ್ನಿಸಿದ ವ್ಯಕ್ತಿ ಬಂಧನ

ಬಿಪಿಒ ಉದ್ಯೋಗಿಯಾಗಿದ್ದ ಪ್ರೇಯಸಿಯನ್ನು ಉಪನಗರದ ದಹಿಸರ್‌ನ ಕಟ್ಟಡದ ವಾಟರ್ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲ್ಲಲು ಯತ್ನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ: ಬಿಪಿಒ ಉದ್ಯೋಗಿಯಾಗಿದ್ದ ಪ್ರೇಯಸಿಯನ್ನು ಉಪನಗರದ ದಹಿಸರ್‌ನ ಕಟ್ಟಡದ ವಾಟರ್ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲ್ಲಲು ಯತ್ನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಯ ಸ್ನೇಹಿತರೊಬ್ಬರು ವಾಸಿಸುವ ಕಟ್ಟಡದಲ್ಲಿ ಭಾನುವಾರ ನಸುಕಿನ ವೇಳೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಸಂತ್ರಸ್ತೆ ಪ್ರಿಯಾಂಗಿ ಸಿಂಗ್ ಅವರು, 15ನೇ ಮಹಡಿಯ ಕಟ್ಟಡದ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ನಿಂದ 18 ಅಡಿ ಕೆಳಗೆ ಬಿದ್ದಿದ್ದಾರೆ ಎಂದು ದಹಿಸರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಇಸಿದ್ದಾರೆ.

ಸಂತ್ರಸ್ತೆಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿ ಮದ್ಯದ ಅಮಲಿನಲ್ಲಿದ್ದ ಮತ್ತು ಅವರು ನೀರಿನ ಟ್ಯಾಂಕ್ ಮೇಲೆ ಕುಳಿತಿದ್ದಾಗ ಪ್ರಿಯಾಂಗಿಯೊಂದಿಗೆ ಜಗಳವಾಡಿದ್ದಾನೆ. ನಂತರ ಕೋಪದ ಭರದಲ್ಲಿ ಆಕೆಯನ್ನು ಟ್ಯಾಂಕ್ ಮೇಲಿಂದ ಕೆಳಗೆ ತಳ್ಳಿದ್ದಾನೆ ಎಂದು ಅವರು ಹೇಳಿದ್ದಾರೆ.

ಸದ್ಯ ಆಕೆಯ ಬೆನ್ನುಮೂಳೆಗೆ ಗಂಭೀರ ಗಾಯವಾಗಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಬೋರಿವಲಿ (ಪಶ್ಚಿಮ) ನಿವಾಸಿಯಾಗಿದ್ದು, ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಮಲಾಡ್‌ನಲ್ಲಿ ವಾಸಿಸುತ್ತಿದ್ದಳು.

'ಘಟನೆಯ ನಂತರ ಪ್ರಿಯಾಂಗಿಯನ್ನು ಮೊದಲು ತನ್ನ ಬೋರಿವ್ಲಿ ಫ್ಲಾಟ್‌ಗೆ ಕರೆದೊಯ್ಯಲು ಮತ್ತು ನಂತರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಕೆಯ ಮಲಾಡ್ ನಿವಾಸಕ್ಕೆ ಕರೆದೊಯ್ಯಲು ಆರೋಪಿ ಕ್ಯಾಬ್ ಅನ್ನು ಬುಕ್ ಮಾಡಿದ್ದ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಕಟ್ಟಡದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ' ಎಂದು ಅವರು ಹೇಳಿದರು.

ಶಾಲೆಯಿಂದಲೂ ಆರೋಪಿ ಮತ್ತು ಸಂತ್ರಸ್ತೆಗೆ ಪರಸ್ಪರ ಪರಿಚಯವಿತ್ತು. ಆರೋಪಿಯು ಮೂರು ತಿಂಗಳ ಹಿಂದೆ ಬಿಪಿಒ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ಅವರು ಆಗಾಗ್ಗೆ ಜಗಳವಾಡುತ್ತಿದ್ದರು, ಆದರೆ ಈ ಬಾರಿ ಅದು ವಿಕೋಪಕ್ಕೆ ತಿರುಗಿದೆ ಎಂದು ಅಧಿಕಾರಿ ಹೇಳಿದರು.

ಪೊಲೀಸರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ