ಪ್ರಾತಿನಿಧಿಕ ಚಿತ್ರ 
ದೇಶ

ಮುಂಬೈ: ಪ್ರೇಯಸಿಯನ್ನು ಕಟ್ಟಡದ ನೀರಿನ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲೆಗೆ ಯತ್ನಿಸಿದ ವ್ಯಕ್ತಿ ಬಂಧನ

ಬಿಪಿಒ ಉದ್ಯೋಗಿಯಾಗಿದ್ದ ಪ್ರೇಯಸಿಯನ್ನು ಉಪನಗರದ ದಹಿಸರ್‌ನ ಕಟ್ಟಡದ ವಾಟರ್ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲ್ಲಲು ಯತ್ನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ: ಬಿಪಿಒ ಉದ್ಯೋಗಿಯಾಗಿದ್ದ ಪ್ರೇಯಸಿಯನ್ನು ಉಪನಗರದ ದಹಿಸರ್‌ನ ಕಟ್ಟಡದ ವಾಟರ್ ಟ್ಯಾಂಕ್‌ ಮೇಲಿಂದ ತಳ್ಳಿ ಕೊಲ್ಲಲು ಯತ್ನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಯ ಸ್ನೇಹಿತರೊಬ್ಬರು ವಾಸಿಸುವ ಕಟ್ಟಡದಲ್ಲಿ ಭಾನುವಾರ ನಸುಕಿನ ವೇಳೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಸಂತ್ರಸ್ತೆ ಪ್ರಿಯಾಂಗಿ ಸಿಂಗ್ ಅವರು, 15ನೇ ಮಹಡಿಯ ಕಟ್ಟಡದ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ನಿಂದ 18 ಅಡಿ ಕೆಳಗೆ ಬಿದ್ದಿದ್ದಾರೆ ಎಂದು ದಹಿಸರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಇಸಿದ್ದಾರೆ.

ಸಂತ್ರಸ್ತೆಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿ ಮದ್ಯದ ಅಮಲಿನಲ್ಲಿದ್ದ ಮತ್ತು ಅವರು ನೀರಿನ ಟ್ಯಾಂಕ್ ಮೇಲೆ ಕುಳಿತಿದ್ದಾಗ ಪ್ರಿಯಾಂಗಿಯೊಂದಿಗೆ ಜಗಳವಾಡಿದ್ದಾನೆ. ನಂತರ ಕೋಪದ ಭರದಲ್ಲಿ ಆಕೆಯನ್ನು ಟ್ಯಾಂಕ್ ಮೇಲಿಂದ ಕೆಳಗೆ ತಳ್ಳಿದ್ದಾನೆ ಎಂದು ಅವರು ಹೇಳಿದ್ದಾರೆ.

ಸದ್ಯ ಆಕೆಯ ಬೆನ್ನುಮೂಳೆಗೆ ಗಂಭೀರ ಗಾಯವಾಗಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಬೋರಿವಲಿ (ಪಶ್ಚಿಮ) ನಿವಾಸಿಯಾಗಿದ್ದು, ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಮಲಾಡ್‌ನಲ್ಲಿ ವಾಸಿಸುತ್ತಿದ್ದಳು.

'ಘಟನೆಯ ನಂತರ ಪ್ರಿಯಾಂಗಿಯನ್ನು ಮೊದಲು ತನ್ನ ಬೋರಿವ್ಲಿ ಫ್ಲಾಟ್‌ಗೆ ಕರೆದೊಯ್ಯಲು ಮತ್ತು ನಂತರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಕೆಯ ಮಲಾಡ್ ನಿವಾಸಕ್ಕೆ ಕರೆದೊಯ್ಯಲು ಆರೋಪಿ ಕ್ಯಾಬ್ ಅನ್ನು ಬುಕ್ ಮಾಡಿದ್ದ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಕಟ್ಟಡದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ' ಎಂದು ಅವರು ಹೇಳಿದರು.

ಶಾಲೆಯಿಂದಲೂ ಆರೋಪಿ ಮತ್ತು ಸಂತ್ರಸ್ತೆಗೆ ಪರಸ್ಪರ ಪರಿಚಯವಿತ್ತು. ಆರೋಪಿಯು ಮೂರು ತಿಂಗಳ ಹಿಂದೆ ಬಿಪಿಒ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ. ಅವರು ಆಗಾಗ್ಗೆ ಜಗಳವಾಡುತ್ತಿದ್ದರು, ಆದರೆ ಈ ಬಾರಿ ಅದು ವಿಕೋಪಕ್ಕೆ ತಿರುಗಿದೆ ಎಂದು ಅಧಿಕಾರಿ ಹೇಳಿದರು.

ಪೊಲೀಸರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT