ಉದ್ಧವ್ ಠಾಕ್ರೆ - ರಾಹುಲ್ ಗಾಂಧಿ 
ದೇಶ

ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಎಂವಿಎ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್

ವಿಡಿ ಸಾವರ್ಕರ್ ಅವರನ್ನು ಕಟುವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ರಾಹುಲ್ ಹಿಂದುತ್ವವಾದಿ ಸಾವರ್ಕರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.

ಶೇಗಾಂವ್: ವಿಡಿ ಸಾವರ್ಕರ್ ಅವರನ್ನು ಕಟುವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ರಾಹುಲ್ ಹಿಂದುತ್ವವಾದಿ ಸಾವರ್ಕರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.  ಆದರೆ ಕೇವಲ ಐತಿಹಾಸಿಕ ಸತ್ಯವನ್ನು ಎತ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಶೆಗಾಂವ್‌ ತಲುಪಿದ್ದು, ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜೈರಾಮ್ ರಮೇಶ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಸಾವರ್ಕರ್ ಕುರಿತ ರಾಹುಲ್  ಗಾಂಧಿಯವರ ಅಭಿಪ್ರಾಯಗಳನ್ನು ಬೆಂಬಲಿಸದಿದ್ದರೂ, ಅದು ಮಹಾ ವಿಕಾಸ್ ಅಘಾಡಿ (ಎಂವಿಎ)ಮೈತ್ರಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ನಿನ್ನೆ ಅಕೋಲಾ ಜಿಲ್ಲೆಯ ವಡೇಗಾಂವ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿ ಬರೆದಿದ್ದರು ಎಂದು ಆರೋಪಿಸಿದ್ದರು.

ಸಾವರ್ಕರ್ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಚಿಹ್ನೆ ಎಂದು ಕಾಂಗ್ರೆಸ್ ನಾಯಕ ಈ ಹಿಂದೆ ಹೇಳಿದ್ದರು.

ರಾಹುಲ್ ಹೇಳಿಕೆ ಇದೀಗ ಪ್ರತಿಭಟನೆಗೆ ಕಾರಣವಾಗಿದ್ದು, ಉದ್ಧವ್ ಠಾಕ್ರೆ ಅವರು ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ರಾಹುಲ್ ಗಾಂಧಿಯ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT