ಅಜಯ್ ಮಾಕೆನ್ 
ದೇಶ

ರಾಜಸ್ಥಾನ: ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಜಯ್ ಮಾಕೆನ್

ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಜೈಪುರ: ಬಂಡಾಯ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಕೆನ್ ಅವರ ಹೆಸರಿದೆ. ಆದರೆ, ಅಶೋಕ್ ಗೆಹ್ಲೋಟ್ ಬಣದ ರಾಜ್ಯ ಸಚಿವರಾದ ಮಹೇಶ್ ಜೋಶಿ, ಶಾಂತಿ ಧರಿವಾಲ್ ಮತ್ತು ಆರ್‌ಟಿಡಿಸಿ ಅಧ್ಯಕ್ಷ ಧರ್ಮೇಂದ್ರ ರಾಥೋಡ್ ಅವರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಈಮಧ್ಯೆ, 40 ಹೆಸರುಗಳಲ್ಲಿ ಗೆಹ್ಲೋಟ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಸೇರಿದ್ದಾರೆ.

ನವೆಂಬರ್ 16 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಮಾಕೆನ್, ತಮ್ಮ ಅಸಮರ್ಥತೆ ಮತ್ತು ಸ್ಥಾನದಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದಿರುವ ಅವರು, ಸೆಪ್ಟೆಂಬರ್ 25 ರಂದು ರಾಜ್ಯದಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

ಮೂವರು ಶಾಸಕರಾದ ಮಹೇಶ್ ಜೋಶಿ, ಧರ್ಮೇಂದ್ರ ರಾಥೋಡ್ ಹಾಗೂ  ಶಾಂತಿ ಧರಿವಾಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಸೆಪ್ಟೆಂಬರ್ 25 ರಂದು ಅಶಿಸ್ತು ತೋರಿದ ಮೂವರು ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಗಮನ ಹರಿಸಲಾಗುತ್ತಿದೆ ಎಂದು ಮಾಕೆನ್ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸೆಪ್ಟೆಂಬರ್ 25 ರಂದು ಕರೆದಿದ್ದ ಸಿಎಲ್‌ಪಿ ಸಭೆಯನ್ನು ಧಿಕ್ಕರಿಸಿದ್ದ ಗೆಹ್ಲೋಟ್ ಬಣದ ಶಾಸಕರು, ಸಮಾನಾಂತರವಾಗಿ ಮತ್ತೊಂದು ಸಭೆಯನ್ನು ನಡೆಸಿದರು. ಹೀಗಾಗಿ, ಅವರಿಗೆ ನೋಟಿಸ್ ನೀಡಲಾಗಿತ್ತು. ಇದೀಗ, ಈ ನಾಯಕರಿಗೆ ಭಾರತ್ ಜೋಡೋ ಯಾತ್ರೆಗೆ ಟಾಸ್ಕ್ ನೀಡಲಾಗುತ್ತಿದ್ದು, ಮಾಕೆನ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಈಮಧ್ಯೆ, ಗೆಹ್ಲೋಟ್ ಬಣದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಧಾ ಮತ್ತು ಶಾಸಕಿ ದಿವ್ಯಾ ಮಡೆರ್ನಾ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೆ, ಪಂಜಾಬ್ ರಾಜ್ಯ ಉಸ್ತುವಾರಿ ಹರೀಶ್ ಚೌಧರಿ ಅವರ ಹೆಸರೂ ಪಟ್ಟಿಯಲ್ಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!