ಅಫ್ತಾಬ್ ಅಮೀನ್ ಪೂನಾವಾಲಾ 
ದೇಶ

ಶ್ರದ್ಧಾ ಹತ್ಯೆ ಪ್ರಕರಣ: ಥರ್ಡ್ ಡಿಗ್ರಿ ಬಳಸಬೇಡಿ, 5 ದಿನದಲ್ಲಿ ಅಫ್ತಾಬ್‌ನ ನಾರ್ಕೋ ಟೆಸ್ಟ್ ಪೂರ್ಣಗೊಳಿಸಿ; ಕೋರ್ಟ್ ಸೂಚನೆ

ಶ್ರದ್ಧಾ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ಐದು ದಿನಗಳೊಳಗೆ ನಾರ್ಕೋ ಅನಾಲಿಟಿಕ್ ಪರೀಕ್ಷೆ ಪೂರ್ಣಗೊಳಿಸುವಂತೆ ದೆಹಲಿ ನ್ಯಾಯಾಲಯವು ನಗರ ಪೊಲೀಸರಿಗೆ ಸೂಚಿಸಿದೆ.

ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನಿಗೆ ಐದು ದಿನಗಳೊಳಗೆ ನಾರ್ಕೋ ಅನಾಲಿಟಿಕ್ ಪರೀಕ್ಷೆ ಪೂರ್ಣಗೊಳಿಸುವಂತೆ ದೆಹಲಿ ನ್ಯಾಯಾಲಯವು ನಗರ ಪೊಲೀಸರಿಗೆ ಸೂಚಿಸಿದೆ. ಅಲ್ಲದೆ ಆರೋಪಿ ಅಫ್ತಾಬ್ ಮೇಲೆ ಥರ್ಡ್ ಡಿಗ್ರಿ ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಜಯಶ್ರೀ ರಾಥೋಡ್ ಅವರು ಐದು ದಿನಗಳೊಳಗೆ ಆರೋಪಿಗೆ ನಾರ್ಕೋ-ಅನಾಲಿಟಿಕ್ ಪರೀಕ್ಷೆಯನ್ನು ನಡೆಸಲು ತನಿಖಾಧಿಕಾರಿಗೆ ಅವಕಾಶ ನೀಡುವಂತೆ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸೂಚಿಸಿದರು.

28ರ ಹರೆಯದ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರ ಶ್ರದ್ಧಾ ವಾಲ್ಕರ್‌ನನ್ನು ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಜ್‌ನಲ್ಲಿ ಇರಿಸಿದ್ದನು. ಸುಮಾರು 18 ದಿನಗಳ ಕಾಲ ದೇಹದ ಕೆಲ ಭಾಗಗಳನ್ನು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶಗಳಲ್ಲಿ ಎಸೆದು ಬರುತ್ತಿದ್ದನು.

ಈ ಜೋಡಿ ಹಣಕಾಸಿನ ವಿಚಾರವಾಗಿ ಆಗಾಗ್ಗೆ ಜಗಳವಾಡುತ್ತಿದ್ದರು. ಇದು ಅತಿರೇಕಕ್ಕೆ ಹೋಗಿದ್ದು ಮೇ 18ರ ಸಂಜೆ ಪೂನಾವಾಲಾ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT