ಅರುಣ್ ಗೋಯೆಲ್ 
ದೇಶ

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ನವದೆಹಲಿ: ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಇದೇ ವರ್ಷ ಡಿಸೆಂಬರ್ 31ಕ್ಕೆ ಅವರು ನಿವೃತ್ತಿಯಾಗಬೇಕಿತ್ತು. ಈ ಹೊಸ ಜವಾಬ್ದಾರಿಯನ್ನು  ತೆಗೆದುಕೊಂಡರೆ, ಹಾಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 2025ರಲ್ಲಿ ಅಧಿಕಾರದಿಂದ ನಿರ್ಗಮಿಸಿದ ನಂತರ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುತ್ತಾರೆ. ಚುನಾವಣಾ ಸಮಿತಿಯಲ್ಲಿ ಸಿಇಸಿ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರೊಂದಿಗೆ ಅರುಣ್ ಗೋಯೆಲ್ ಸೇರಲಿದ್ದಾರೆ. 

ಸಿಇಸಿಯಾಗಿದ್ದ  ಸುಶೀಲ್ ಚಂದ್ರ ಈ ವರ್ಷ ಮೇ ನಲ್ಲಿ ನಿವೃತ್ತಿಯಾದ ನಂತರ ಈ ಹುದ್ದೆ ಖಾಲಿಯಿತ್ತು. ಭಾರೀ ಉದ್ಯಮಗಳ ಕಾರ್ಯದರ್ಶಿಯಾಗಿದ್ದ ಗೋಯೆಲ್ ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದರು. ಅವರು ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಗೋಯೆಲ್ ಅವರು ಡಿಸೆಂಬರ್ 2027 ರವರೆಗೆ ಅಧಿಕಾರದಲ್ಲಿರುತ್ತಾರೆ.

ಗುಜರಾತ್  ಚುನಾವಣೆಗೆ ಕೆಲವು ದಿನಗಳಿರುವಂತೆಯೇ ಗೋಯೆಲ್ ಅವರ ನೇಮಕವಾಗಿದೆ. ಮುಂಬರುವ ತಿಂಗಳುಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸುವಾಗ ಚುನಾವಣಾ ಸಮಿತಿಯು ತನ್ನ ಸಂಪೂರ್ಣ ಶಕ್ತಿಯನ್ನು ಹೊಂದಿರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT