ಅರುಣ್ ಗೋಯೆಲ್ 
ದೇಶ

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ನವದೆಹಲಿ: ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಇದೇ ವರ್ಷ ಡಿಸೆಂಬರ್ 31ಕ್ಕೆ ಅವರು ನಿವೃತ್ತಿಯಾಗಬೇಕಿತ್ತು. ಈ ಹೊಸ ಜವಾಬ್ದಾರಿಯನ್ನು  ತೆಗೆದುಕೊಂಡರೆ, ಹಾಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 2025ರಲ್ಲಿ ಅಧಿಕಾರದಿಂದ ನಿರ್ಗಮಿಸಿದ ನಂತರ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುತ್ತಾರೆ. ಚುನಾವಣಾ ಸಮಿತಿಯಲ್ಲಿ ಸಿಇಸಿ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರೊಂದಿಗೆ ಅರುಣ್ ಗೋಯೆಲ್ ಸೇರಲಿದ್ದಾರೆ. 

ಸಿಇಸಿಯಾಗಿದ್ದ  ಸುಶೀಲ್ ಚಂದ್ರ ಈ ವರ್ಷ ಮೇ ನಲ್ಲಿ ನಿವೃತ್ತಿಯಾದ ನಂತರ ಈ ಹುದ್ದೆ ಖಾಲಿಯಿತ್ತು. ಭಾರೀ ಉದ್ಯಮಗಳ ಕಾರ್ಯದರ್ಶಿಯಾಗಿದ್ದ ಗೋಯೆಲ್ ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದರು. ಅವರು ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಗೋಯೆಲ್ ಅವರು ಡಿಸೆಂಬರ್ 2027 ರವರೆಗೆ ಅಧಿಕಾರದಲ್ಲಿರುತ್ತಾರೆ.

ಗುಜರಾತ್  ಚುನಾವಣೆಗೆ ಕೆಲವು ದಿನಗಳಿರುವಂತೆಯೇ ಗೋಯೆಲ್ ಅವರ ನೇಮಕವಾಗಿದೆ. ಮುಂಬರುವ ತಿಂಗಳುಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸುವಾಗ ಚುನಾವಣಾ ಸಮಿತಿಯು ತನ್ನ ಸಂಪೂರ್ಣ ಶಕ್ತಿಯನ್ನು ಹೊಂದಿರುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!