ಅರುಣ್ ಗೋಯೆಲ್ 
ದೇಶ

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ

ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ನವದೆಹಲಿ: ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಇದೇ ವರ್ಷ ಡಿಸೆಂಬರ್ 31ಕ್ಕೆ ಅವರು ನಿವೃತ್ತಿಯಾಗಬೇಕಿತ್ತು. ಈ ಹೊಸ ಜವಾಬ್ದಾರಿಯನ್ನು  ತೆಗೆದುಕೊಂಡರೆ, ಹಾಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 2025ರಲ್ಲಿ ಅಧಿಕಾರದಿಂದ ನಿರ್ಗಮಿಸಿದ ನಂತರ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುತ್ತಾರೆ. ಚುನಾವಣಾ ಸಮಿತಿಯಲ್ಲಿ ಸಿಇಸಿ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರೊಂದಿಗೆ ಅರುಣ್ ಗೋಯೆಲ್ ಸೇರಲಿದ್ದಾರೆ. 

ಸಿಇಸಿಯಾಗಿದ್ದ  ಸುಶೀಲ್ ಚಂದ್ರ ಈ ವರ್ಷ ಮೇ ನಲ್ಲಿ ನಿವೃತ್ತಿಯಾದ ನಂತರ ಈ ಹುದ್ದೆ ಖಾಲಿಯಿತ್ತು. ಭಾರೀ ಉದ್ಯಮಗಳ ಕಾರ್ಯದರ್ಶಿಯಾಗಿದ್ದ ಗೋಯೆಲ್ ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದರು. ಅವರು ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಗೋಯೆಲ್ ಅವರು ಡಿಸೆಂಬರ್ 2027 ರವರೆಗೆ ಅಧಿಕಾರದಲ್ಲಿರುತ್ತಾರೆ.

ಗುಜರಾತ್  ಚುನಾವಣೆಗೆ ಕೆಲವು ದಿನಗಳಿರುವಂತೆಯೇ ಗೋಯೆಲ್ ಅವರ ನೇಮಕವಾಗಿದೆ. ಮುಂಬರುವ ತಿಂಗಳುಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸುವಾಗ ಚುನಾವಣಾ ಸಮಿತಿಯು ತನ್ನ ಸಂಪೂರ್ಣ ಶಕ್ತಿಯನ್ನು ಹೊಂದಿರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT