ರಾಹುಲ್ ಗಾಂಧಿ ಜೊತೆ ಮೇಧಾ ಪಾಟ್ಕರ್ 
ದೇಶ

ಭಾರತ್ ಜೋಡೊ ಯಾತ್ರೆಯಲ್ಲಿ ಮೇಧಾ ಪಾಟ್ಕರ್: ಗುಜರಾತಿಗರ ಮೇಲೆ ರಾಹುಲ್ ಗಾಂಧಿಗೆ ಇರುವ ಹಗೆತನ ಸಾಬೀತು; ಬಿಜೆಪಿ ಕಿಡಿ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆ  ಮಹಾರಾಷ್ಟ್ರ ಪ್ರವೇಶಿಸಿದೆ. ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ  ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಭಾಗಿಯಾಗಿದ್ದರು.

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆ  ಮಹಾರಾಷ್ಟ್ರ ಪ್ರವೇಶಿಸಿದೆ. ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ  ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಭಾಗಿಯಾಗಿದ್ದರು.

ಮೇಧಾ ಪಾಟ್ಕರ್ ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಕ್ಕೆ ಬಿಜೆಪಿ ವಾಗ್ದಾಳಿ ನಡೆಸಿದೆ. ಮೇಧಾ ಪಾಟ್ಕರ್‌ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ಅವರು, ಗುಜರಾತ್‌ ಹಾಗೂ ಗುಜರಾತಿಗರ ಮೇಲೆ ಇರುವ ಹಗೆತನವನ್ನು ತೋರ್ಪಡಿಸಿದ್ದಾರೆ ಎಂದು ಬಿಜೆಪಿ ಕಿಡಿ ಕಾರಿದೆ.

‘ಭಾರತ್‌ ಜೋಡೊ ಯಾತ್ರೆಯಲ್ಲಿ ಮೇಧಾ ಪಾಟ್ಕರ್‌ ಅವರಿಗೆ ಆದ್ಯತೆ ನೀಡುವ ಮೂಲಕ ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ಅವರು ಗುಜರಾತ್‌ ಹಾಗೂ ಗುಜರಾತಿಗರ ಮೇಲೆ ಇರುವ ಹಗೆತವನ್ನು ಮತ್ತೊಮ್ಮೆ ತೋರ್ಪಡಿಸಿದ್ದಾರೆ. ದಶಕಗಳ ಕಾಲ ಗುಜರಾತಿಗಳಿಗೆ ನೀರು ನೀಡುವುದನ್ನು ವಿರೋಧಿಸಿದವರ ಪರ ರಾಹುಲ್‌ ಗಾಂಧಿ ನಿಂತಿದ್ದಾರೆ. ಇದನ್ನು ಗುಜರಾತಿಗಳು ಸಹಿಸಿಕೊಳ್ಳುವುದಿಲ್ಲ‘ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆರೋಪಿಸಿದ್ದಾರೆ.

ಸರ್ದಾರ್‌ ಸರೋವರಕ್ಕೆ ಅಣೆಕಟ್ಟು ನಿರ್ಮಾಣ ವಿರೋಧಿಸಿ, ಮೇಧಾ ಪಾಟ್ಕರ್‌ ಅವರು ನರ್ಮದಾ ಬಚಾವೋ ಆಂದೋಲನ ರೂಪಿಸಿದ್ದರು. ಈ ಆಣೆಕಟ್ಟು ನಿರ್ಮಾಣದಿಂದ ಸಾವಿರಾರು ಕುಟುಂಬಗಳು ನೆಲೆ ಕಳೆದುಕೊಳ್ಳುತ್ತವೆ. ಹೀಗಾಗಿ ಈ ಯೋಜನೆಯನ್ನು ಮೇಧಾ ವಿರೋಧಿಸಿ ಜನಾಂದೋಲನ ಮಾಡಿದ್ದರು. 2017ರಲ್ಲಿ ಸರ್ದಾರ್‌ ಸರೋವರ ಡ್ಯಾಂ ಲೋಕಾರ್ಪಣೆಗೊಂಡಿತು.

ಸದ್ಯ ಮಹಾರಾಷ್ಟ್ರದಲ್ಲಿ ರಾಹುಲ್‌ ಗಾಂಧಿಯವರ ಜೋಡೊ ಯಾತ್ರೆ ಸಾಗುತ್ತಿದ್ದು, ವಾಸಿಂ ಎಂಬಲ್ಲಿ ಮೇಧಾ ಪಾಟ್ಕರ್‌ ರಾಹುಲ್‌ ಗಾಂಧಿ ಜತೆ ಹೆಜ್ಜೆ ಹಾಕಿದ್ದರು. ಮಹಾರಾಷ್ಟ್ರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT