ಎಸ್. ಜೈಶಂಕರ್ 
ದೇಶ

ಹೆಚ್ಚುತ್ತಿರುವ 'ಭಯೋತ್ಪಾದನೆ ಬೆದರಿಕೆ' ಮಟ್ಟಹಾಕಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಒತ್ತಾಯ

ಭಯೋತ್ಪಾದನೆ ಮಟ್ಟಹಾಕಲು ನಿರುತ್ಸಾಹಗೊಳ್ಳದಂತೆ ಶನಿವಾರ ಬಲವಾಗಿ ಪ್ರತಿಪಾದಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಈ ಅಪಾಯವನ್ನು ಪರಿಹರಿಸಲು ರಾಜಕೀಯ ಬದಿಗೊತ್ತುವಂತೆ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ. 

ನವದೆಹಲಿ: ಭಯೋತ್ಪಾದನೆ ಮಟ್ಟಹಾಕಲು ನಿರುತ್ಸಾಹಗೊಳ್ಳದಂತೆ ಶನಿವಾರ ಬಲವಾಗಿ ಪ್ರತಿಪಾದಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಈ ಅಪಾಯವನ್ನು ಪರಿಹರಿಸಲು ರಾಜಕೀಯ ಬದಿಗೊತ್ತುವಂತೆ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ. 

ಇಲ್ಲಿ ನಡೆದ 'ನೋ ಮನಿ ಫಾರ್ ಟೆರರ್' ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಜೈಶಂಕರ್, ಕೆಲವರು ಭಯೋತ್ಪಾದನೆಯನ್ನು ಸರ್ಕಾರಿ-ಕೌಶಲದ ಸಾಧನವಾಗಿ ಬಳಸಿಕೊಳ್ಳುವ ಪ್ರವೃತ್ತಿ ಮತ್ತು ಇತರರು ಅದನ್ನು ಸಮರ್ಥಿಸಿಕೊಳ್ಳಲು ಸಿದ್ಧರಿರುವುದರಿಂದ ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದನೆಯ ಬೆದರಿಕೆಗೆ ಪ್ರಮಾಣ ಮತ್ತು ತೀವ್ರತೆ ಹೆಚ್ಚಿದೆ ಎಂದರು. 

"ಭಯೋತ್ಪಾದನೆಯು ಭಯೋತ್ಪಾದನೆಯಾಗಿದೆ ಮತ್ತು ರಾಜಕೀಯವಾಗಿ ಅದನ್ನು ಎಂದಿಗೂ ಸಮರ್ಥಿಸಲು ಸಾಧ್ಯವಿಲ್ಲ. ಈ ಅಪಾಯವನ್ನು ಎದುರಿಸಲು ರಾಜಕೀಯವನ್ನು ಬದಿಗೊತ್ತಬೇಕಾಗಿದೆ. ಎಲ್ಲಾ ರಂಗಗಳಲ್ಲಿ, ಎಲ್ಲಾ ಸಂದರ್ಭಗಳಲ್ಲಿ ಮತ್ತು ಎಲ್ಲಾ ಸ್ಥಳಗಳಲ್ಲಿ ಭಯೋತ್ಪಾದನೆ ವಿರುದ್ಧ ದೃಢವಾಗಿ ಹೋರಾಡಬೇಕು ಎಂದು ಜೈಶಂಕರ್ ಹೇಳಿದರು.  ಎರಡು ದಿನಗಳ ಸಮ್ಮೇಳನದಲ್ಲಿ ಜೈಶಂಕರ್ ಮಾಡಿದ ಭಾಷಣವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಭಯೋತ್ಪಾದನೆಗೆ ಹಣಕಾಸೂ ಪೂರೈಕೆ ವಿರುದ್ಧ ಹೋರಾಟ ಈ ವೇದಿಕೆಯ ಉದ್ದೇಶವಾಗಿದೆ. ಭಯೋತ್ಪಾದನೆ ಅಂತಾ ಬಂದಾಗ ನಾವು, ಬೇರೆ ದಾರಿ ನೋಡಬಾರದು, ಎಂದಿಗೂ ರಾಜೀಯಾಗಬಾರದು, ನ್ಯಾಯವನ್ನು ಖಚಿತಪಡಿಸಿಕೊಳ್ಳುವ ನಮ್ಮ ಅನ್ವೇಷಣೆಯನ್ನು ನಾವು ಎಂದಿಗೂ ಬಿಟ್ಟುಕೊಡಬಾರದು ಎಂದು ಅವರು ಹೇಳಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT