ಭಾರತೀಯ ಸೇನೆ 
ದೇಶ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಒಳ ನುಸುಳುಕೋರನ ಹೊಡೆದುರುಳಿಸಿದ ಸೇನೆ!

ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.

ಶ್ರೀನಗರ: ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಶನಿವಾರ ಪಾಕಿಸ್ತಾನದ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದ್ದು, ಇಡೀ ಪ್ರದೇಶವನ್ನು ಇದೀಗ ಸೇನೆ ಸುತ್ತುವರೆದಿದೆ ಎನ್ನಲಾಗಿದೆ.

ಈ ಬಗ್ಗೆ ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ತಡೆದಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದೆ. ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು ಶೋಧ ಕಾರ್ಯ ಆರಂಭಿಸಿದೆ ಎಂದು ಹೇಳಿದ್ದಾರೆ.

ಎಲ್ಒಸಿಯ ನೌಶೇರಾ ಸೆಕ್ಟರ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಒಳ ನುಸುಳುವಿಕೆ ಚಟುವಟಿಕೆ ತೀವ್ರವಾಗಿದ್ದು, ಇದೇ ಕಾರಣತ್ತೆ ನೌಶೇರಾ ಸೇರಿದಂತೆ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆ ತನ್ನ ಗಸ್ತು ತೀವ್ರಗೊಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT