ಅಫ್ತಾಬ್ ಅಮೀನ್ ಪೂನಾವಾಲಾನನ್ನು ಸ್ಥಳ ಮಹಜರಿಗೆ ಪೊಲೀಸರು ಮೆಹ್ರೌಲಿ ಅರಣ್ಯ ಪ್ರದೇಶಕ್ಕೆ ಕರೆತಂದರು. 
ದೇಶ

ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಮತ್ತಷ್ಟು ದೇಹದ ಭಾಗಗಳು ಪತ್ತೆ, ಮೂರು ರಾಜ್ಯಗಳಿಗೆ ವಿಸ್ತರಿಸಿದ ತನಿಖೆ

ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ದೆಹಲಿಯ ಯುವತಿ ಶ್ರದ್ಧಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲರನ್ನು ಕಳುಹಿಸಲಾಗಿದ್ದು, ಗುರುಗ್ರಾಮ್ ಬಳಿಯ ಕಾಡಿನಿಂದ ಪೊಲೀಸರು ಶ್ರದ್ಧಾಳ ಮತ್ತಷ್ಟು ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. 

ನವದೆಹಲಿ: ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ದೆಹಲಿಯ ಯುವತಿ ಶ್ರದ್ಧಾ ವಾಲ್ಕರ್ ಹತ್ಯೆಯ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲರನ್ನು ಕಳುಹಿಸಲಾಗಿದ್ದು, ಗುರುಗ್ರಾಮ್ ಬಳಿಯ ಕಾಡಿನಿಂದ ಪೊಲೀಸರು ಶ್ರದ್ಧಾಳ ಮತ್ತಷ್ಟು ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. 

ಶ್ರದ್ಧಾ ವಾಲ್ಕರ್ ದೇಹದ ಭಾಗಗಳನ್ನು ಗುರುಗ್ರಾಮ್ ಬಳಿಯ ಕಾಡಿನಲ್ಲಿ ಎಸೆದಿದ್ದೇನೆ ಎಂದು ವಿಚಾರಣೆ ವೇಳೆ ಅಫ್ತಾಬ್ ಹೇಳಿದ ಹಿನ್ನೆಲೆಯಲ್ಲಿ ಆತನನ್ನು ಅಲ್ಲಿ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಗಿತ್ತು. ನಮಗೆ ಕಪ್ಪು ಪ್ಲಾಸ್ಟಿಕ್ ಚೀಲ ಕಾಣಿಸಿತು. ಅದರಲ್ಲಿ ಮೃತದೇಹದ ಭಾಗಗಳಿದ್ದವು. ಶ್ರದ್ಧಾಳ ತಲೆಯ ಭಾಗಗಳು ಮಾತ್ರ ಇನ್ನೂ ಸಿಕ್ಕಿಲ್ಲ. ಅಫ್ತಾಬ್ ನ ಫ್ಲಾಟ್ ನಿಂದ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳೆಲ್ಲಾ ಗೃಹೋಪಯೋಗಿ ವಸ್ತುಗಳು. ಶ್ರದ್ಧಾಳನ್ನು ಕೊಲೆ ಮಾಡಲು ಬಳಸಿದ ಆಯುಧಗಳಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಅಫ್ತಾಬ್ ಕೊಲೆ ಮಾಡುವ ಹೊತ್ತಿಗೆ ಶ್ರದ್ಧಾ ಧರಿಸಿಕೊಂಡಿದ್ದ ಬಟ್ಟೆಯ ಬಗ್ಗೆ ಕೇಳಿದಾಗ ಆತ ಅದನ್ನು ನಗರಪಾಲಿಕೆಯವರು ಕಸ ಸಂಗ್ರಹಿಸಲು ಬರುವ ವ್ಯಾನಿಗೆ ಎಸೆದಿರುವುದಾಗಿ ತಿಳಿಸಿದ್ದಾನೆ. ವಾಹನವನ್ನು ಗುರುತು ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಫ್ತಾಬ್ ಅಮೀನ್ ಪೂನಾವಾಲಾನನ್ನು ಸ್ಥಳ ಮಹಜರಿಗೆ ಪೊಲೀಸರು ಮೆಹ್ರೌಲಿ ಅರಣ್ಯ ಪ್ರದೇಶಕ್ಕೆ ಕರೆತಂದರು. ಇನ್ನು ಶ್ರದ್ಧಾ ವಾಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಮಾಡುತ್ತಾ ಹೋದರೆ ಪೊಲೀಸರಿಗೆ ಮತ್ತಷ್ಟು ಸಂಗತಿಗಳು ಬಯಲಿಗೆ ಬರುತ್ತಿದ್ದು, ಉತ್ತರಾಖಂಡ, ಮಹಾರಾಷ್ಟ್ರ ಮತ್ತು ಹರಿಯಾಣಕ್ಕೆ ಅನೇಕ ಪೊಲೀಸ್ ತಂಡಗಳು ಭೇಟಿ ನೀಡುತ್ತಿವೆ. ಡಿಎನ್‌ಎ ವಿಶ್ಲೇಷಣೆಗಾಗಿ ಶ್ರದ್ಧಾಳ ತಂದೆ ಮತ್ತು ಸಹೋದರನ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇದಹ ಮೂಳೆಗಳು ಶ್ರದ್ಧಾಳದ್ದು ಹೌದೇ ಅಲ್ಲವೇ ಎಂದು ತಿಳಿಯಲು ತಂದೆ ಮತ್ತು ಸಹೋದರನ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT