ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ 
ದೇಶ

ಎಂಸಿಡಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಮಿಶ್ರಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್, "ದೆಹಲಿಯ ಪೂರ್ವಾಂಚಲ ಸಮುದಾಯದ ಜನಪ್ರಿಯ ನಾಯಕರಾಗಿರುವ ಮಹಾಬಲ್ ಮಿಶ್ರಾ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನಿಮ್ಮ ಅನುಭವದೊಂದಿಗೆ ನಾವೆಲ್ಲರೂ ಒಟ್ಟಾಗಿ ದೇಶ ಅಭಿವೃದ್ಧಿಗಾಗಿ ಕೆಲಸ ಮಾಡೋಣ" ಎಂದರು.

ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಎಎಪಿ ಸೇರ್ಪಡೆಯಾದ ನಂತರ ಸಾಮಾಜಿಕ ಮಾಧ್ಯಮದ ಮೂಲಕ ಮಿಶ್ರಾ ಹೇಳಿದ್ದಾರೆ.

ಪಶ್ಚಿಮ ದೆಹಲಿಯ ಮಾಜಿ ಲೋಕಸಭಾ ಸಂಸದ ಮತ್ತು ದ್ವಾರಕಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮಿಶ್ರಾ ಅವರನ್ನು 2020 ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ "ಪಕ್ಷ ವಿರೋಧಿ ಚಟುವಟಿಕೆಗಾಗಿ" ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ