ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ 
ದೇಶ

ಎಂಸಿಡಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಮಿಶ್ರಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್, "ದೆಹಲಿಯ ಪೂರ್ವಾಂಚಲ ಸಮುದಾಯದ ಜನಪ್ರಿಯ ನಾಯಕರಾಗಿರುವ ಮಹಾಬಲ್ ಮಿಶ್ರಾ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನಿಮ್ಮ ಅನುಭವದೊಂದಿಗೆ ನಾವೆಲ್ಲರೂ ಒಟ್ಟಾಗಿ ದೇಶ ಅಭಿವೃದ್ಧಿಗಾಗಿ ಕೆಲಸ ಮಾಡೋಣ" ಎಂದರು.

ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಎಎಪಿ ಸೇರ್ಪಡೆಯಾದ ನಂತರ ಸಾಮಾಜಿಕ ಮಾಧ್ಯಮದ ಮೂಲಕ ಮಿಶ್ರಾ ಹೇಳಿದ್ದಾರೆ.

ಪಶ್ಚಿಮ ದೆಹಲಿಯ ಮಾಜಿ ಲೋಕಸಭಾ ಸಂಸದ ಮತ್ತು ದ್ವಾರಕಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮಿಶ್ರಾ ಅವರನ್ನು 2020 ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ "ಪಕ್ಷ ವಿರೋಧಿ ಚಟುವಟಿಕೆಗಾಗಿ" ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT