ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ 
ದೇಶ

ಎಂಸಿಡಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಮಿಶ್ರಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್, "ದೆಹಲಿಯ ಪೂರ್ವಾಂಚಲ ಸಮುದಾಯದ ಜನಪ್ರಿಯ ನಾಯಕರಾಗಿರುವ ಮಹಾಬಲ್ ಮಿಶ್ರಾ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನಿಮ್ಮ ಅನುಭವದೊಂದಿಗೆ ನಾವೆಲ್ಲರೂ ಒಟ್ಟಾಗಿ ದೇಶ ಅಭಿವೃದ್ಧಿಗಾಗಿ ಕೆಲಸ ಮಾಡೋಣ" ಎಂದರು.

ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಎಎಪಿ ಸೇರ್ಪಡೆಯಾದ ನಂತರ ಸಾಮಾಜಿಕ ಮಾಧ್ಯಮದ ಮೂಲಕ ಮಿಶ್ರಾ ಹೇಳಿದ್ದಾರೆ.

ಪಶ್ಚಿಮ ದೆಹಲಿಯ ಮಾಜಿ ಲೋಕಸಭಾ ಸಂಸದ ಮತ್ತು ದ್ವಾರಕಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮಿಶ್ರಾ ಅವರನ್ನು 2020 ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ "ಪಕ್ಷ ವಿರೋಧಿ ಚಟುವಟಿಕೆಗಾಗಿ" ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT