ಸ್ಫೋಟದ ದೃಶ್ಯ 
ದೇಶ

ಮಂಗಳೂರಿನಲ್ಲಿ ಆಟೋ ಸ್ಫೋಟ: ತಮಿಳುನಾಡು ಪೊಲೀಸರಿಂದ ಆರೋಪಿಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯ ವಿಚಾರಣೆ

ಕರ್ನಾಟಕದ ಮಂಗಳೂರಿನಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಕಮಂಡಲದಲ್ಲಿ 40 ವರ್ಷದ ವ್ಯಕ್ತಿಯನ್ನು ತಮಿಳುನಾಡು ಪೊಲೀಸರು ಭಾನುವಾರ ವಿಚಾರಣೆ ನಡೆಸಿದ್ದಾರೆ.

ಉದಕಮಂಡಲ: ಕರ್ನಾಟಕದ ಮಂಗಳೂರಿನಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಕಮಂಡಲದಲ್ಲಿ 40 ವರ್ಷದ ವ್ಯಕ್ತಿಯನ್ನು ತಮಿಳುನಾಡು ಪೊಲೀಸರು ಭಾನುವಾರ ವಿಚಾರಣೆ ನಡೆಸಿದ್ದಾರೆ.

ಮಾಹಿತಿಯ ಆಧಾರದ ಮೇಲೆ ಪೊಲೀಸರು ಕುಂಡಾಸಪ್ಪಾಯಿ ಗ್ರಾಮಕ್ಕೆ ಧಾವಿಸಿ ಘಟನೆಗೆ ಸಂಬಂಧಿಸಿದಂತೆ  ಸುರೇಂದ್ರನನ್ನು ವಿಚಾರಿಸದರು. ಸ್ಫೋಟ ಪ್ರಕರಣದ ಆರೋಪಿ ಬಳಸುತ್ತಿದ್ದ ಮೊಬೈಲ್ ಸಿಮ್ ಕಾರ್ಡ್ ಅನ್ನು ಸುರೇಂದ್ರನ ಆಧಾರ್ ಕಾರ್ಡ್ ಬಳಸಿ ಖರೀದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಸಿಮ್ ಕಾರ್ಡ್ ಖರೀದಿಸಲು ಸುರೇಂದ್ರನ್ ಸಹಾಯ ಮಾಡಿದ್ದಾನೋ ಅಥವಾ ಆರೋಪಿಯು ಆತನಿಗೆ ತಿಳಿಯದಂತೆ ನಂಬರ್ ಬಳಸಿದ್ದನೇ ಅಥವಾ ಸಿಮ್ ಕಾರ್ಡ್ ಅನ್ನು ನಕಲಿ ಆಧಾರ್ ಕಾರ್ಡ್ ಸಲ್ಲಿಸಿ ಖರೀದಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ಸುರೇಂದ್ರನ್ ಅವರನ್ನು ಕೊಯಮತ್ತೂರಿಗೆ ಕರೆದೊಯ್ಯಲಾಗುತ್ತಿದೆ.

ಮಂಗಳೂರಿನಲ್ಲಿ ಶನಿವಾರ ಸಂಜೆ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿ ಪ್ರಯಾಣಿಕರು ಮತ್ತು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT