ಶ್ರದ್ಧಾ-ಅಫ್ತಾಬ್ 
ದೇಶ

ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ತಲೆಬುರುಡೆ, ದವಡೆಯ ಭಾಗ ಪತ್ತೆ: ಪ್ರಯೋಗಾಲಯಕ್ಕೆ ಕಳುಹಿಸಿದ ದೆಹಲಿ ಪೊಲೀಸರು!

ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೆಹಲಿ ಪೊಲೀಸರು ಮೆಹ್ರೌಲಿ ಅರಣ್ಯದಿಂದ ಮಾನವ ತಲೆಬುರುಡೆ ಮತ್ತು ದವಡೆಯ ಭಾಗವನ್ನು ವಶಪಡಿಸಿಕೊಂಡಿದ್ದಾರೆ. 

ನವದೆಹಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೆಹಲಿ ಪೊಲೀಸರು ಮೆಹ್ರೌಲಿ ಅರಣ್ಯದಿಂದ ಮಾನವ ತಲೆಬುರುಡೆ ಮತ್ತು ದವಡೆಯ ಭಾಗವನ್ನು ವಶಪಡಿಸಿಕೊಂಡಿದ್ದಾರೆ. 

ಇದರೊಂದಿಗೆ ಮಾನವ ದೇಹದ ಇತರ ಭಾಗಗಳ ಮೂಳೆಗಳೂ ಪತ್ತೆಯಾಗಿವೆ. ಕಾಡಿನಲ್ಲಿ ಪತ್ತೆಯಾಗಿರುವ ಶವದ ಅವಶೇಷಗಳು 27 ವರ್ಷದ ಶ್ರದ್ಧಾ ವಾಕರ್ ಅವರದ್ದಾಗಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ವಿಧಿವಿಜ್ಞಾನ ಪ್ರಯೋಗಾಲಯದ ತಂಡದ ಪರೀಕ್ಷೆ ನಂತರವೇ ಇದು ದೃಢೀಕರಿಸಲ್ಪಡುತ್ತದೆ.

ಭಾನುವಾರ, ದೆಹಲಿ ಪೊಲೀಸ್ ತಂಡವು ಅಫ್ತಾಬ್ ನನ್ನು ಛತ್ತರ್‌ಪುರ ಪಹಾರಿ ಪ್ರದೇಶದಲ್ಲಿ ಅವರು ನೆಲೆಸಿದ್ದ ಮನೆಗೆ ಕರೆದೊಯ್ದಿದ್ದರು. ಅಲ್ಲಿ ಶ್ರದ್ಧಾಳ ಬ್ಯಾಗ್ ಅನ್ನು ವಶಪಡಿಸಿಕೊಂಡಿದ್ದು ಆಕೆ ಕೆಲವು ಬಟ್ಟೆಗಳು ಮತ್ತು ಶೂಗಳು ಪತ್ತೆಯಾಗಿವೆ.

200 ಪೊಲೀಸರ ತಂಡ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಿತ್ತು!
ತನಿಖೆಯ ಸಮಯದಿಂದ ಪೊಲೀಸ್ ತಂಡ ಹೊರಡುವವರೆಗೆ, ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ಮನೆಯ ಹೊರಗೆ ಮತ್ತು ಸುತ್ತಲಿನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ನಿಯೋಜಿಸಲಾಗಿತ್ತು. ಮತ್ತೊಂದೆಡೆ, ಸುಮಾರು 200 ಪೊಲೀಸರ ತಂಡವು ಶೋಧ ಕಾರ್ಯಾಚರಣೆಗಾಗಿ ಮೆಹ್ರೌಲಿ ಅರಣ್ಯಕ್ಕೆ ತಲುಪಿತು. ಶೋಧ ಕಾರ್ಯಾಚರಣೆಯಲ್ಲಿ, ಪೊಲೀಸ್ ತಂಡವು ಅರಣ್ಯದಿಂದ ಕೆಲವು ಅವಶೇಷಗಳು ಮತ್ತು ಕತ್ತರಿಸಿದ ಮೂಳೆಗಳನ್ನು ವಶಪಡಿಸಿಕೊಂಡಿದೆ. ಏತನ್ಮಧ್ಯೆ, ದೆಹಲಿ ಪೊಲೀಸರು ಮುನ್ಸಿಪಲ್ ಕಾರ್ಪೊರೇಷನ್ ಜೊತೆಗೆ ಮೈದಂಗರ್ಹಿ ಪ್ರದೇಶದ ಕೊಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಶೋಧ ಕಾರ್ಯಾಚರಣೆಯಲ್ಲಿ ಸುಮಾರು 1000 ಲೀಟರ್ ನೀರನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಅದೇ ಕೊಳದಲ್ಲಿ ಶ್ರದ್ಧಾಳ ತಲೆಯನ್ನು ಎಸೆದಿರುವುದಾಗಿ ಅಫ್ತಾಬ್ ತಪ್ಪೊಪ್ಪಿಕೊಂಡಿದ್ದನು.

ಅಫ್ತಾಬ್ ಮನೆಯ ಹೊರಗಿನ ರಸ್ತೆಯಲ್ಲಿ ಜನಜಂಗುಳಿ
ತನಿಖೆಗಾಗಿ ಅಫ್ತಾಬ್‌ನ ಮನೆಗೆ ಆಗಮಿಸಿದ ಪೊಲೀಸ್ ತಂಡವು ಸ್ಥಳಕ್ಕೆ ತಲುಪುತ್ತಿದ್ದಂತೆ ಸ್ಥಳೀಯರ ಗುಂಪು ಗುಂಪಾಗಿ ಪ್ರಾರಂಭವಾಯಿತು. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಸಮಯದಲ್ಲಿ, ಭದ್ರತಾ ವ್ಯವಸ್ಥೆಯ ಅಡಿಯಲ್ಲಿ, ಸೈನಿಕರ ನಿಯೋಜನೆಯೊಂದಿಗೆ ಮನೆಯ ಸುತ್ತಲಿನ ಪ್ರದೇಶವನ್ನು ಕಂಟೋನ್ಮೆಂಟ್ ಆಗಿ ಪರಿವರ್ತಿಸಲಾಯಿತು. ಯಾವುದೇ ಸ್ಥಳೀಯರು ಅಥವಾ ಇತರರು ಮನೆಯ ಹತ್ತಿರ ಬರಲು ಸಹ ಅನುಮತಿಸಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT