ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ 
ದೇಶ

ಆಫ್ತಾಬ್ ನಂತಹ ಹಂತಕರನ್ನು ಗಲ್ಲಿಗೇರಿಸುವ ಕಾನೂನಿನ ಅಗತ್ಯವಿದೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಪ್ರಿಯತಮೆಯನ್ನು ಕೊಂದು ತುಂಡರಿಸಿದ ಆಫ್ತಾಬ್ ನಂತಹ ಹಂತಕರು ನಮ್ಮ ದೇಶಕ್ಕೆ ಅಗತ್ಯವಿಲ್ಲ, ಬದಲಿಗೆ ರಾಮ, ಪ್ರದಾನಿ ಮೋದಿಯಂತಹ ವ್ಯಕ್ತಿಗಳು ಬೇಕಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ನವದೆಹಲಿ: ಪ್ರಿಯತಮೆಯನ್ನು ಕೊಂದು ತುಂಡರಿಸಿದ ಆಫ್ತಾಬ್ ನಂತಹ ಹಂತಕರು ನಮ್ಮ ದೇಶಕ್ಕೆ ಅಗತ್ಯವಿಲ್ಲ, ಬದಲಿಗೆ ರಾಮ, ಪ್ರದಾನಿ ಮೋದಿಯಂತಹ ವ್ಯಕ್ತಿಗಳು ಬೇಕಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ದೆಹಲಿ ಎಂಸಿಡಿ ಚುನಾವಣೆ ಹಿನ್ನೆಲೆಯಲ್ಲಿ ಗೊಂಡಾ ಪ್ರದೇಶದಲ್ಲಿ ಇಂದು ಸಂಜೆ ರೋಡ್ ಶೋ ವೇಳೆಯಲ್ಲಿ ಮಾತನಾಡಿದ ಅವರು, ಲವ್ ಜಿಹಾದಿ ವಿರುದ್ಧ ಕಾನೂನು ಮತ್ತು ಏಕರೂಪ ನಾಗರಿಕ ಸಂಹಿತೆ ಅಗತ್ಯವಿದೆ. ಆಫ್ತಬ್ ನಂತಹ ಹಂತಕರನ್ನು ಗಲ್ಲಿಗೇರಿಸಲು ಕಾನೂನಿನ ಅಗತ್ಯವಿದೆ ಎಂದರು. 

ಇದೇ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಶರ್ಮಾ, ರಂಗಭೂಮಿ ಚೆನ್ನಾಗಿ ಅಭಿನಯಿಸುತ್ತಾರೆ. ಹಿಂದೂಗಳು ಶತ್ರುಗಳು ಎಂಬಂತೆ ಭಾವಿಸುತ್ತಾರೆ. ಆದರೆ, ಹಿಂದೂಗಳಿಲ್ಲದೆ ಭಾರತ ಅಸ್ತಿತ್ವದಲ್ಲಿರಬಹುದೇ ಎಂದು ಪ್ರಶ್ನಿಸಿದರು.

ಸಿಎಎ ಅನುಷ್ಠಾನ ಸಮಯದಲ್ಲಿ ದೆಹಲಿಯಲ್ಲಿ ನಡೆದ ಗಲಭೆಗಳಿಗೆ ಕೇಜ್ರಿವಾಲ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT