ಸಂಜಯ್ ರಾವುತ್-ರಾಹುಲ್ ಗಾಂಧಿ 
ದೇಶ

ಕರೆ ಮಾಡಿದ ರಾಹುಲ್ ಗಾಂಧಿ; ರಾಜಕೀಯ ಕಹಿ ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪ ಎಂದ ಸಂಜಯ್ ರಾವುತ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವುತ್ ಅವರಿಗೆ ಸೋಮವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, 'ರಾಜಕೀಯ ಕಹಿ' ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ ಎಂದು ರಾವುತ್ ಹೇಳಿದ್ದಾರೆ.

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವುತ್ ಅವರಿಗೆ ಸೋಮವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, 'ರಾಜಕೀಯ ಕಹಿ' ಸಮಯದಲ್ಲಿ ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ ಎಂದು ರಾವುತ್ ಹೇಳಿದ್ದಾರೆ.

ಸೆಪ್ಟೆಂಬರ್ 7 ರಿಂದ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಕೆಂದರೆ, ಅವರು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಗಮನವನ್ನು ಕೇಂದ್ರೀಕರಿಸುತ್ತಿದ್ದಾರೆ ಎಂದು ರಾವುತ್ ಹೇಳಿದರು.

ಈ ಹಿಂದೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಸಂದರ್ಭ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಸಂಜಯ್ ರಾವುತ್ ಕಿಡಿಕಾರಿದ್ದರು.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಳೆದ ವಾರ ತಮ್ಮ ಪಕ್ಷವು ಸಾವರ್ಕರ್ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದೆ ಮತ್ತು ದಿವಂಗತ ಹಿಂದುತ್ವ ಸಿದ್ಧಾಂತವಾದಿಯ ಬಗ್ಗೆ ರಾಹುಲ್ ಗಾಂಧಿಯವರ ಟೀಕೆಗಳನ್ನು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿರುವ ರಾವುತ್ ಸೋಮವಾರ ಟ್ವೀಟ್‌ನಲ್ಲಿ, 'ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳಿದ್ದರೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ! ಭಾರತ್ ಜೋಡೋ ಯಾತ್ರೆಯ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ರಾಹುಲ್ ಗಾಂಧೀಜಿ ನನ್ನ ಆರೋಗ್ಯವನ್ನು ವಿಚಾರಿಸಲು ನಿನ್ನೆ  ಕರೆ ಮಾಡಿದ್ದರು. 'ನಾವು ನಿಮ್ಮ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದೆವು' ಎಂದು ಅವರು ಹೇಳಿದರು ಎಂದು ರಾವುತ್ ತಿಳಿಸಿದ್ದಾರೆ.

110 ದಿನಗಳನ್ನು ಜೈಲಿನಲ್ಲಿ ಕಳೆದ ರಾಜಕೀಯ ಸಹೋದ್ಯೋಗಿಯ ನೋವನ್ನು ಅನುಭವಿಸಿದ ಅವರ ಸಹಾನುಭೂತಿಯನ್ನು ನಾನು ಪ್ರಶಂಸಿಸುತ್ತೇನೆ. ರಾಜಕೀಯದ ಕಹಿಯ ಕಾಲದಲ್ಲಿ, ಇಂತಹ ನಡವಳಿಕೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ಅವರು ತಮ್ಮ ಯಾತ್ರೆಯಲ್ಲಿ ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸುತ್ತಿದ್ದಾರೆ. ಆದ್ದರಿಂದಲೇ ಈ ಯಾತ್ರೆಯು ಭಾರಿ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ರಾವುತ್ ಈ ತಿಂಗಳ ಆರಂಭದಲ್ಲಿ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT