ಸುಪ್ರೀಂ ಕೋರ್ಟ್ 
ದೇಶ

ಮೊರ್ಬಿ ಸೇತುವೆ ಕುಸಿತ; ತನಿಖೆ-ಇತರ ಅಂಶಗಳನ್ನು ನಿಯಮಿತ ಮೇಲ್ವಿಚಾರಣೆಗೆ ಹೈಕೋರ್ಟ್‌ಗೆ 'ಸುಪ್ರೀಂ' ಸೂಚನೆ

140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.

ನವದೆಹಲಿ: 140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.

ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠವು ಈಗಾಗಲೇ ಘಟನೆಯ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಹಲವಾರು ಆದೇಶಗಳನ್ನು ನೀಡಿರುವುದರಿಂದ, ಇದೀಗ ಅರ್ಜಿಗಳನ್ನು ಆಲಿಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಹೇಳಿದೆ.

ಆದಾಗ್ಯೂ, ಘಟನೆಯ ಸ್ವತಂತ್ರ ತನಿಖೆ ಮತ್ತು ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಗೌರವಾನ್ವಿತ ಪರಿಹಾರವನ್ನು ನೀಡುವಂತೆ ಕೋರಿ ತಮ್ಮ ಮನವಿಯೊಂದಿಗೆ ಪಿಐಎಲ್ ಅರ್ಜಿದಾರರು ಮತ್ತು ಘಟನೆಯಲ್ಲಿ ತನ್ನ ಇಬ್ಬರು ಸಂಬಂಧಿಕರನ್ನು ಕಳೆದುಕೊಂಡ ಇನ್ನೊಬ್ಬ ದಾವೆದಾರರು ಹೈಕೋರ್ಟ್‌ಗೆ ತೆರಳಲು ಅನುಮತಿ ನೀಡಿತು.

ಅರ್ಜಿದಾರರು ನಂತರ ತನ್ನನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ಟೋಬರ್ 30 ರಂದು ಮೊರ್ಬಿಯ ಮಚ್ಚು ನದಿಯ ಮೇಲಿನ ಬ್ರಿಟಿಷ್ ಕಾಲದ ತೂಗು ಸೇತುವೆ ಕುಸಿದು 47 ಮಕ್ಕಳು ಸೇರಿದಂತೆ 140 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!