ಅಸ್ಸಾಂ-ಮೇಘಾಲಯ ಗಡಿಯಲ್ಲಿ ಘರ್ಷಣೆ 
ದೇಶ

ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ ವೇಳೆ ಘರ್ಷಣೆ; ಅರಣ್ಯ ಸಿಬ್ಬಂದಿ ಸೇರಿ 6 ಸಾವು

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ  ಟ್ರಕ್ ಅನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಮರಗಳ್ಳರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು,  ಘಟನೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.

ಘಟನೆಯ ಬಳಿಕ ಗಡಿ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಘರ್ಷಣೆಯ ಬಳಿಕ ಮೇಘಾಲಯ ಸರ್ಕಾರ 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.

ಮೂಲಗಳ ಪ್ರಕಾರ, ಮೇಘಾಲಯದ ಗಡಿಯಾದ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಮೊಯಿಕ್ರಾಂಗ್‌ನಲ್ಲಿ ಅಸ್ಸಾಂ ಅರಣ್ಯ ಇಲಾಖೆಯ ತಂಡ ಮುಂಜಾನೆ 3 ಗಂಟೆ ವೇಳೆಗೆ ಟ್ರಕ್ ಒಂದನ್ನು ತಡೆದಿದೆ. ಟ್ರಕ್‌ನಲ್ಲಿದ್ದವರು ಈ ವೇಳೆ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರನ್ನು ತಡೆ ಹಿಡಿಯಲು ಅರಣ್ಯ ಸಿಬ್ಬಂದಿ ಗುಂಡು ಹಾರಿಸಿ ಟ್ರಕ್‌ನ ಟೈರ್ ಪಂಕ್ಚರ್ ಮಾಡಿದ್ದಾರೆ. ಬಳಿಕ ಅರಣ್ಯ ಸಿಬ್ಬಂದಿ ಟ್ರಕ್‌ನಲ್ಲಿದ್ದ ಮೂವರನ್ನು ಬಂಧಿಸಿ, ಜಿರಿಕಿಂಡಿಂಗ್‌ಗೆ ಕರೆತಂದಿದ್ದಾರೆ. ಘಟನೆಯ ಬಗ್ಗೆ ಅರಣ್ಯ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಹೆಚ್ಚಿನ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.

ಇದೆಲ್ಲದರ ಬಳಿಕ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಮೇಘಾಲಯದಿಂದ ಅಪಾರ ಸಂಖ್ಯೆಯ ಜನರು ಕಠಾರಿ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘಟನಾ ಸ್ಥಳಕ್ಕೆ ಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರ ತಂಡ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಮೃತ ಅರಣ್ಯ ಸಿಬ್ಬಂದಿಯನ್ನು ಬಿದ್ಯಾ ಸಿಂಗ್ ಲೆಹ್ತ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಅರಣ್ಯ ಸಿಬ್ಬಂದಿ ಅಭಿಮನ್ಯು ಗಾಯಗೊಂಡಿದ್ದಾರೆ. ಪರಿಸ್ಥಿತಿ ಸದ್ಯ ನಿಯಂತ್ರಣಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ Shimron Hetmyer ಸಿಡಿಲಬ್ಬರದ ಬ್ಯಾಟಿಂಗ್, 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

SCROLL FOR NEXT