ಆರೋಪಿ ಆಫ್ತಾಬ್ 
ದೇಶ

ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಆರೋಪಿ ಆಫ್ತಾಬ್ ಗೆ ಸುಳ್ಳು ಪತ್ತೆ ಪರೀಕ್ಷೆ

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಕರ್ ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಹಂತಕ ಆಫ್ತಾಬ್ ಅಮಿನ್ ಪೂನಾವಾಲಾನಿಗೆ ದೆಹಲಿ ಪೊಲೀಸರು ಮಂಗಳವಾರ ಸುಳ್ಳು ಪತ್ತೆ ಪರೀಕ್ಷೆ ನಡೆಸುತ್ತಿದ್ದಾರೆ.

ನವದೆಹಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಕರ್ ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಹಂತಕ ಆಫ್ತಾಬ್ ಅಮಿನ್ ಪೂನಾವಾಲಾನಿಗೆ ದೆಹಲಿ ಪೊಲೀಸರು ಸುಳ್ಳು ಪತ್ತೆ ಪರೀಕ್ಷೆ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳಿಗೆ ಇಬ್ಬರೂ ವಾಸಿಸುತ್ತಿದ್ದ ಫ್ಲಾಟ್‌ನಲ್ಲಿ ರಕ್ತದ ಕಲೆ ಸೇರಿದಂತೆ ಹೆಚ್ಚಿನ ಪುರಾವೆ ಸಿಕ್ಕಿದ್ದು, ನಗರದ ನ್ಯಾಯಾಲಯವೊಂದರಿಂದ ಅನುಮತಿ ಸಿಕ್ಕ ನಂತರ ಆರೋಪಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗಿದೆ. 

ಇದಕ್ಕೂ ಮುನ್ನಾ, ಶ್ರದ್ಧಾ ವಾಕರ್ ಅವರನ್ನು ಕೋಪದಿಂದ ಕೊಲೆ ಮಾಡಿದ್ದು, ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ಆರೋಪಿ ಆಫ್ತಾಬ್ ನ್ಯಾಯಾಲಯಕ್ಕೆ ಹೇಳಿದ್ದಾಗಿ ಆರೋಪಿ ಪರ ವಕೀಲ ಅಬಿನಾಶ್ ಕುಮಾರ್ ತಿಳಿಸಿದರು. ಆರೋಪಿ ಸುಳ್ಳು ಪತ್ತೆ ಪರೀಕ್ಷೆಗಾಗಿ ಪ್ರಶ್ನಾವಳಿ ತಯಾರಿಸಲಾಗಿದೆ. ಇದರಿಂದಾಗಿ ಭೀಕರ ಹತ್ಯೆಯಲ್ಲಿನ ಘಟನೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಾಗುತ್ತದೆ  ಎಂದು ಮೂಲಗಳು ಹೇಳಿವೆ.

ಪಾಲಿಗ್ರಾಫ್ ಪರೀಕ್ಷೆಯ ನಂತರ, ಪೊಲೀಸರು ಕಳೆದ ವಾರ ನ್ಯಾಯಾಲಯದಿಂದ ಅನುಮತಿ ಪಡೆದ ನಾರ್ಕೋ ಪರೀಕ್ಷೆ ನಡೆಸುವ ಸಾಧ್ಯತೆಯಿದೆ. ಮಂಗಳವಾರ ಸಂಜೆ, ತಜ್ಞರು ಪಾಲಿಗ್ರಾಫ್ ಪರೀಕ್ಷೆ ಪ್ರಾರಂಭಿಸಿದ್ದಾರೆ. ಈ ಪ್ರಕ್ರಿಯೆಯು ಸಮಯ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಎಫ್‌ಎಸ್‌ಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT