ಅಫ್ತಾಬ್ ಅಮಿನ್ ಪೂನಾವಾಲ 
ದೇಶ

ಶ್ರದ್ಧಾ ಕೊಲೆ ಪ್ರಕರಣ: ಆರೋಪಿಯ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದಿಂದ ಅನುಮತಿ ಪಡೆದ ದೆಹಲಿ ಪೊಲೀಸರು

ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆ ನಡೆಸಲು ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನವದೆಹಲಿ: ತನ್ನ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆ ನಡೆಸಲು ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿ ದೆಹಲಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

'ಹೌದು. ಪೂನಾವಾಲಾ ಅವರ ಪಾಲಿಗ್ರಾಫ್ ಪರೀಕ್ಷೆ ನಡೆಸಲು ನಾವು ದೆಹಲಿ ನ್ಯಾಯಾಲಯದಿಂದ ಅನುಮತಿ ಪಡೆದಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಾಲಿಗ್ರಾಫ್ ಪರೀಕ್ಷೆ ಎಂದರೇನು?

ಪಾಲಿಗ್ರಾಫ್ ಪರೀಕ್ಷೆಯು ಆಕ್ರಮಣಶೀಲವಲ್ಲದ ತಂತ್ರವಾಗಿದ್ದು, ಇದನ್ನು ಸುಳ್ಳು ಪತ್ತೆ ಪರೀಕ್ಷೆ ಎಂದೂ ಸಹ ಕರೆಯಲಾಗುತ್ತದೆ. ಈ ಪರೀಕ್ಷೆಯಲ್ಲಿ ಸಾಧನಗಳನ್ನು ವ್ಯಕ್ತಿಗೆ ಹಾಕಲಾಗುತ್ತದೆ. ಬಳಿಕ ವ್ಯಕ್ತಿಗೆ ಘಟನೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಆ ಪ್ರಶ್ನೆಗಳಿಗೆ ಉತ್ತರಿಸಿದಾಗ ಗ್ರಾಫ್‌ನಲ್ಲಿನ ವ್ಯತ್ಯಾಸದಿಂದ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ಔಷಧವನ್ನು ಬಳಸಲಾಗುವುದಿಲ್ಲ.

ಅಮೆರಿಕನ್ ಸೈಕಲಾಜಿಕಲ್ ಅಸೋಸಿಯೇಷನ್ ​​(ಎಪಿಎ) ಪ್ರಕಾರ, ಪಾಲಿಗ್ರಾಫ್ ಪರೀಕ್ಷೆಗಳು ವ್ಯಕ್ತಿಯ 'ಹೃದಯ ಬಡಿತ/ರಕ್ತದೊತ್ತಡ, ಉಸಿರಾಟ ಮತ್ತು ಚರ್ಮದ ವಾಹಕತೆಯನ್ನು' ಅಳೆಯುತ್ತದೆ ಮತ್ತು ದಾಖಲಿಸುತ್ತದೆ. ಇದರಿಂದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಪರೀಕ್ಷೆಯ ಉದ್ದೇಶವು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯು ಅಪರಾಧ ಮಾಡಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನು ಸಾಬೀತುಪಡಿಸುವುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?