ಶಶಿ ತರೂರ್ 
ದೇಶ

ನನ್ನಿಂದ ಯಾರಿಗೂ ಭಯವಿಲ್ಲ, ನಾನು ಯಾರಿಗೂ ಭಯಪಡುವುದಿಲ್ಲ: ಯುಡಿಎಫ್ ನಾಯಕರ ಭೇಟಿ ಬಳಿಕ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಮಲಬಾರ್ ಪ್ರವಾಸದಲ್ಲಿದ್ದು, ಯುಡಿಎಫ್- ಮಿತ್ರ ಪಕ್ಷ ಐಯುಎಂಎಲ್ ನಾಯಕರನ್ನು ಭೇಟಿ ಮಾಡಿದ್ದಾರೆ.

ಮಲಬಾರ್: ಕಾಂಗ್ರೆಸ್ ಸಂಸದ ಶಶಿ ತರೂರ್ ಮಲಬಾರ್ ಪ್ರವಾಸದಲ್ಲಿದ್ದು, ಯುಡಿಎಫ್- ಮಿತ್ರ ಪಕ್ಷ ಐಯುಎಂಎಲ್ ನಾಯಕರನ್ನು ಭೇಟಿ ಮಾಡಿದ್ದಾರೆ. 

ಈ ಭೇಟಿಯ ಬಳಿಕ ಮಾತನಾಡಿರುವ ಶಶಿ ತರೂರ್ "ನಾನು ಯಾರಿಗೂ ಭಯಪಡುವುದಿಲ್ಲ, ನನ್ನಿಂದಲೂ ಯಾರಿಗೂ ಭಯವಿಲ್ಲ"" ಎಂಬ ಮಾರ್ಮಿಕ ಹೇಳಿಕೆ ನೀಡಿದ್ದಾರೆ. 

ಕೇರಳದಲ್ಲಿ ತಮ್ಮ ಪ್ರವಾಸದಿಂದ ಯಾರು ಭಯಪಟ್ಟಿದ್ದಾರೆ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಶಿ ತರೂರ್, "ನಾನು ಯಾರಿಗೂ ಭಯಪಡುವುದಿಲ್ಲ, ನನ್ನಿಂದಲೂ ಯಾರಿಗೂ ಭಯವಿಲ್ಲ" ಎಂದಿದ್ದಾರೆ. ಕೇರಳ ಕಾಂಗ್ರೆಸ್ ನಲ್ಲಿ ಶಶಿ ತರೂರ್ ಅವರ ಬೆಂಬಲಿಗರು ಹೆಚ್ಚಾಗುತ್ತಿದ್ದು, ತರೂರ್ ಗುಂಪು ಎಂದೇ ಗುರುತಿಸಿಕೊಂಡಿರುವುದು ರಾಜ್ಯಮಟ್ಟದ ನಾಯಕತ್ವದಲ್ಲಿ ಆತಂಕಕಾರಿ ಬೆಳವಣಿಗೆಯಾಗಿದೆ ಎಂಬ ವಿಶ್ಲೇಷಣೆಗಳ ನಡುವೆ ಶಶಿ ತರೂರ್ ನಡೆ ಮಹತ್ವ ಪಡೆದುಕೊಂಡಿದೆ.

ಐಯುಎಂಎಲ್ ನಾಯಕರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್, ಇದೊಂದು ಸೌಹಾರ್ದಯುತ ಭೇಟಿಯಷ್ಟೇ ಎಂದು ಹೇಳಿದ್ದಾರೆ. ತಿರುವನಂತಪುರಂ ನ ಸಂಸದರಾಗಿರುವ ಶಶಿ ತರೂರ್ ಗೆ ಅವರ ಕಟ್ಟಾ ಬೆಂಬಲಿಗ ಎಂಪಿ ಎಂಕೆ ರಾಘವನ್ ಅವರು ಸಾಥ್ ನೀಡಿದ್ದರು. ತಮಗೆ ಪಕ್ಷದ ಒಳಗೇ ಗುಂಪನ್ನು ಕಟ್ಟುವ ಉದ್ದೇಶ, ಆಸಕ್ತಿ ಇಲ್ಲ ಎಂದು ಶಶಿ ತರೂರ್ ಸ್ಪಷ್ಟನೆ ನೀಡಿದ್ದಾರೆ.

ಮಲಬಾರ್ ಪ್ರವಾಸ ಕೈಗೊಂಡಿರುವ ಶಶಿ ತರೂರ್ ಗೆ ಕೇರಳದ ವಿಪಕ್ಷ ನಾಯಕ ವಿ.ಡಿ ಸತೀಶನ್ ಎಚ್ಚರಿಕೆ ನೀಡಿದ್ದು, ಈ ರೀತಿಯ ಪ್ರತ್ಯೇಕ ಚಟುವಟಿಕೆಗಳಿಗೆ ಪಕ್ಷದಲ್ಲಿ ಜಾಗವಿಲ್ಲ, ಇಂತಹ ಯಾವುದೇ ನಡೆಗಳನ್ನೂ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ಶಶಿ ತರೂರ್ ವಿಷಯವಾಗಿ ಕೇರಳ ಕಾಂಗ್ರೆಸ್ ನಲ್ಲಿ ಭಿನ್ನಮತ ಉಲ್ಬಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT