ದೇಶ

ಎನ್‌ಆರ್‌ಸಿಯಿಂದ ಪಾರಾಗಲು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ: ಮಮತಾ ಬ್ಯಾನರ್ಜಿ

Lingaraj Badiger

ಕೋಲ್ಕತಾ: ಕೇಂದ್ರ ಸರ್ಕಾರ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಜಾರಿಗೊಳಿಸುವ ನೆಪದಲ್ಲಿ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸುತ್ತಿದ್ದು, ಇದರಿಂದ ತಪ್ಪಿಸಿಕೊಳ್ಳಲು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಅಂಚಿನಲ್ಲಿರುವ ಕುಟುಂಬಗಳಿಗೆ ಭೂಮಿ ಪಟ್ಟಾ ವಿತರಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ, "ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಿ. ಇಲ್ಲದಿದ್ದರೆ, ನಿಮ್ಮನ್ನು ಎನ್‌ಆರ್‌ಸಿ ಹೆಸರಿನಲ್ಲಿ ಬಂಧನ ಶಿಬಿರಗಳಿಗೆ ಕಳುಹಿಸಲಾಗುತ್ತದೆ. ಇದು ನಾಚಿಕೆಗೇಡು, ಅವಮಾನ ಮತ್ತು ನಾಚಿಕೆಗೇಡಿನ ಸಂಗತಿ" ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

'ರೈಲ್ವೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಬಲವಂತವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ' ಘಟನೆಗಳನ್ನು ಉಲ್ಲೇಖಿಸಿದ ಸಿಎಂ ಮಮತಾ, "ಸರಿಯಾದ ಪರಿಹಾರ ಮತ್ತು ಪುನರ್ವಸತಿ ಇಲ್ಲದೆ ಬಂಗಾಳದಲ್ಲಿ ಯಾವುದೇ ಸ್ಥಳಾಂತರಕ್ಕೆ ಅನುಮತಿ ನೀಡುವುದಿಲ್ಲ" ಎಂದು ಹೇಳಿದರು.

ನಿಮ್ಮ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾದರೆ ಪ್ರತಿಭಟನೆ ಮಾಡಲು ಆರಂಭಿಸಿ. ರಾಜ್ಯ ಸರ್ಕಾರ ನಿಮ್ಮೊಂದಿಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದರು.

SCROLL FOR NEXT