ಮಮತಾ ಬ್ಯಾನರ್ಜಿ 
ದೇಶ

ಎನ್‌ಆರ್‌ಸಿಯಿಂದ ಪಾರಾಗಲು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ: ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಜಾರಿಗೊಳಿಸುವ ನೆಪದಲ್ಲಿ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸುತ್ತಿದ್ದು, ಇದರಿಂದ ತಪ್ಪಿಸಿಕೊಳ್ಳಲು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ....

ಕೋಲ್ಕತಾ: ಕೇಂದ್ರ ಸರ್ಕಾರ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಜಾರಿಗೊಳಿಸುವ ನೆಪದಲ್ಲಿ ಜನರನ್ನು ಬಂಧನ ಶಿಬಿರಗಳಿಗೆ ಕಳುಹಿಸುತ್ತಿದ್ದು, ಇದರಿಂದ ತಪ್ಪಿಸಿಕೊಳ್ಳಲು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಅಂಚಿನಲ್ಲಿರುವ ಕುಟುಂಬಗಳಿಗೆ ಭೂಮಿ ಪಟ್ಟಾ ವಿತರಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ, "ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಿ. ಇಲ್ಲದಿದ್ದರೆ, ನಿಮ್ಮನ್ನು ಎನ್‌ಆರ್‌ಸಿ ಹೆಸರಿನಲ್ಲಿ ಬಂಧನ ಶಿಬಿರಗಳಿಗೆ ಕಳುಹಿಸಲಾಗುತ್ತದೆ. ಇದು ನಾಚಿಕೆಗೇಡು, ಅವಮಾನ ಮತ್ತು ನಾಚಿಕೆಗೇಡಿನ ಸಂಗತಿ" ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

'ರೈಲ್ವೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಬಲವಂತವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ' ಘಟನೆಗಳನ್ನು ಉಲ್ಲೇಖಿಸಿದ ಸಿಎಂ ಮಮತಾ, "ಸರಿಯಾದ ಪರಿಹಾರ ಮತ್ತು ಪುನರ್ವಸತಿ ಇಲ್ಲದೆ ಬಂಗಾಳದಲ್ಲಿ ಯಾವುದೇ ಸ್ಥಳಾಂತರಕ್ಕೆ ಅನುಮತಿ ನೀಡುವುದಿಲ್ಲ" ಎಂದು ಹೇಳಿದರು.

ನಿಮ್ಮ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾದರೆ ಪ್ರತಿಭಟನೆ ಮಾಡಲು ಆರಂಭಿಸಿ. ರಾಜ್ಯ ಸರ್ಕಾರ ನಿಮ್ಮೊಂದಿಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!